ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 14 ಜನವರಿ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ರಸ್ತೆಯಲ್ಲಿ ದಿಢೀರ್ ಅಡ್ಡ ಬಂದ ಹಸುವಿಗೆ ಬೈಕ್ ಡಿಕ್ಕಿಯಾಗಿ ಒಂದು ಮಗು ಗಾಯಗೊಂಡಿತ್ತು. ಇದೆ ಮಾರ್ಗದಲ್ಲಿ ಬರುತ್ತಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ, ತಮ್ಮ ಬೆಂಗಾವಲು ವಾಹನದಲ್ಲಿ ಮಗುವನ್ನು ಆಸ್ಪತ್ರೆಗೆ ಕಳುಹಿಸಿ ಕರ್ತವ್ಯ ಪ್ರಜ್ಞೆ ಮರೆದಿದ್ದಾರೆ. ಅಲ್ಲದೆ ಆಸ್ಪತ್ರೆಗೆ ತೆರಳಿ ಮಗುವಿನ ಆರೋಗ್ಯವನ್ನು ವಿಚಾರಿಸಿದ್ದಾರೆ.
ಬಿ.ಆರ್.ಪಿ ಬಳಿ ಅಪಘಾತ ಸಂಭವಿಸಿದೆ. ಮುತ್ತಿನಕೊಪ್ಪದ ದಂಪತಿ ಮಗುವಿನೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದರು. ಹಸುವೊಂದು ದಿಢೀರ್ ಅಡ್ಡ ಬಂದಿದೆ. ಹಸುವಿಗೆ ಬೈಕ್ ಡಿಕ್ಕಿಯಾಗಿ ದಂಪತಿ, ಮಗು ಕೆಳಗೆ ಬಿದ್ದಿದ್ದಾರೆ. ಘಟನೆಯಲ್ಲಿ ಮಗುವಿಗೆ ಗಾಯವಾಗಿದೆ.
ಕರ್ತವ್ಯ ಪ್ರಜ್ಞೆ ಮೆರೆದ ಗೃಹ ಸಚಿವರು
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬೆಂಗಳೂರಿನಿಂದ ತೀರ್ಥಹಳ್ಳಿಗೆ ರಸ್ತೆ ಮಾರ್ಗವಾಗಿ ತೆರಳುತ್ತಿದ್ದರು. ಬಿ.ಆರ್.ಪಿ ಬಳಿ ಬರುತ್ತಿದ್ದಾಗ ಅಪಘಾತ ಸಂಭವಿಸಿರುವುದು ಗಮನಕ್ಕೆ ಬಂದಿದೆ. ಬೆಂಗಾವಲು ವಾಹನ ಸಿಬ್ಬಂದಿಗೆ ಮಗುವನ್ನು ಕೂಡಲೆ ಆಸ್ಪತ್ರೆಗೆ ಕರೆದೊಯ್ಯುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚಿಸಿದ್ದಾರೆ.
ಮಗುವನ್ನು ಕೂಡಲೆ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಆಸ್ಪತ್ರೆಗೆ ಭೇಟಿ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಮಗುವಿನ ಆರೋಗ್ಯ ವಿಚಾರಿಸಿದರು. ಅಲ್ಲದೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ನೆರವು ನೀಡುವಂತೆ ಪೊಲೀಸ್ ಸಿಬ್ಬಂದಿಗೆ ತಿಳಿಸಿದರು.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






