ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 14 ಜನವರಿ 2022
ರಸ್ತೆಯಲ್ಲಿ ದಿಢೀರ್ ಅಡ್ಡ ಬಂದ ಹಸುವಿಗೆ ಬೈಕ್ ಡಿಕ್ಕಿಯಾಗಿ ಒಂದು ಮಗು ಗಾಯಗೊಂಡಿತ್ತು. ಇದೆ ಮಾರ್ಗದಲ್ಲಿ ಬರುತ್ತಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ, ತಮ್ಮ ಬೆಂಗಾವಲು ವಾಹನದಲ್ಲಿ ಮಗುವನ್ನು ಆಸ್ಪತ್ರೆಗೆ ಕಳುಹಿಸಿ ಕರ್ತವ್ಯ ಪ್ರಜ್ಞೆ ಮರೆದಿದ್ದಾರೆ. ಅಲ್ಲದೆ ಆಸ್ಪತ್ರೆಗೆ ತೆರಳಿ ಮಗುವಿನ ಆರೋಗ್ಯವನ್ನು ವಿಚಾರಿಸಿದ್ದಾರೆ.
ಬಿ.ಆರ್.ಪಿ ಬಳಿ ಅಪಘಾತ ಸಂಭವಿಸಿದೆ. ಮುತ್ತಿನಕೊಪ್ಪದ ದಂಪತಿ ಮಗುವಿನೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದರು. ಹಸುವೊಂದು ದಿಢೀರ್ ಅಡ್ಡ ಬಂದಿದೆ. ಹಸುವಿಗೆ ಬೈಕ್ ಡಿಕ್ಕಿಯಾಗಿ ದಂಪತಿ, ಮಗು ಕೆಳಗೆ ಬಿದ್ದಿದ್ದಾರೆ. ಘಟನೆಯಲ್ಲಿ ಮಗುವಿಗೆ ಗಾಯವಾಗಿದೆ.
ಕರ್ತವ್ಯ ಪ್ರಜ್ಞೆ ಮೆರೆದ ಗೃಹ ಸಚಿವರು
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬೆಂಗಳೂರಿನಿಂದ ತೀರ್ಥಹಳ್ಳಿಗೆ ರಸ್ತೆ ಮಾರ್ಗವಾಗಿ ತೆರಳುತ್ತಿದ್ದರು. ಬಿ.ಆರ್.ಪಿ ಬಳಿ ಬರುತ್ತಿದ್ದಾಗ ಅಪಘಾತ ಸಂಭವಿಸಿರುವುದು ಗಮನಕ್ಕೆ ಬಂದಿದೆ. ಬೆಂಗಾವಲು ವಾಹನ ಸಿಬ್ಬಂದಿಗೆ ಮಗುವನ್ನು ಕೂಡಲೆ ಆಸ್ಪತ್ರೆಗೆ ಕರೆದೊಯ್ಯುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚಿಸಿದ್ದಾರೆ.
ಮಗುವನ್ನು ಕೂಡಲೆ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಆಸ್ಪತ್ರೆಗೆ ಭೇಟಿ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಮಗುವಿನ ಆರೋಗ್ಯ ವಿಚಾರಿಸಿದರು. ಅಲ್ಲದೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ನೆರವು ನೀಡುವಂತೆ ಪೊಲೀಸ್ ಸಿಬ್ಬಂದಿಗೆ ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200