SHIVAMOGGA LIVE NEWS | 8 AUGUST 2023
SHANKARAGHATTA : ಐಎಎಸ್ ಅಧಿಕಾರಿಯೊಬ್ಬರಿಗೆ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರಾಗಿ (Registrar) ಹೆಚ್ಚುವರಿ ಜವಾಬ್ದಾರಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಈ ನಡೆ ಕುತೂಹಲ ಮೂಡಿಸಿದೆ.
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಲೋಖಂಡೆ ಸ್ನೇಹಲ್ ಸುಧಾಕರ್ ಅವರಿಗೆ ಕುವೆಂಪು ವಿವಿಯ ಕುಲಸಚಿವ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಇವತ್ತು ಮಧ್ಯಾಹ್ನ ಲೋಖಂಡೆ ಸ್ನೇಹಲ್ ಸುಧಾಕರ್ ಅವರು ಕುವೆಂಪು ವಿವಿಯಲ್ಲಿ ಅಧಿಕಾರ ವಹಿಸಿಕೊಂಡರು.
ಈಚೆಗಷ್ಟೆ ಪ್ರೊ. ಕಣ್ಣನ್ ನೇಮಕವಾಗಿತ್ತು
ಇತ್ತೀಚೆಗಷ್ಟೆ ಕುವೆಂಪು ವಿವಿಯ ಕುಲಸಚಿವರಾಗಿ (Registrar) ಪ್ರೊ. ಪಿ.ಕಣ್ಣನ್ ಅವರು ನೇಮಿಸಲಾಗಿತ್ತು. ಜು.28ರಂದು ಪ್ರೊ. ಕಣ್ಣನ್ ಅವರು ಅಧಿಕಾರ ವಹಿಸಿಕೊಂಡಿದ್ದರು. ಉಪನ್ಯಾಸಕರೊಬ್ಬರನ್ನು ಕುಲಸಚಿವ ಸ್ಥಾನಕ್ಕೆ ನೇಮಕ ಮಾಡಿದ್ದು ಚರ್ಚೆಗೆ ಕಾರಣವಾಗಿತ್ತು. ಈ ಮಧ್ಯೆ ಕುಲಸಚಿವರನ್ನು ದಿಢೀರ್ ಬದಲಾವಣೆ ಮಾಡಿದ್ದು ಕುತೂಹಲ ಮೂಡಿಸಿದೆ. ಸಾಮಾನ್ಯವಾಗಿ ಕೆಎಎಸ್ ಅಧಿಕಾರಿಯನ್ನು ಕುಲುಸಚಿವರನ್ನಾಗಿ ನೇಮಿಸಲಾಗುತ್ತಿತ್ತು.3
ಇದನ್ನೂ ಓದಿ – ವೆರೈಟಿ ಡ್ರೆಸ್, ಬಗೆಬಗೆ ಸ್ಟೈಲ್, ಶಿವಮೊಗ್ಗದಲ್ಲಿ ಜೋರಿತ್ತು ವಿಜ್ಞಾನ ವಿದ್ಯಾರ್ಥಿಗಳ ಟ್ರೆಡೀಷನಲ್ ಡೇ ಸೆಲಬ್ರೇಷನ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200