ದೇವಸ್ಥಾನದ ಗ್ರಿಲ್‌ ಮುರಿದು, ಹುಂಡಿ ಒಡೆದು ಕಾಣಿಕೆ ಕಳವು

ಭದ್ರಾವತಿ: ನಗರದ ಭೂತನಗುಡಿಯ ಭೂತಪ್ಪ ಶನೈಶ್ಚರ ದೇವಾಲಯದಲ್ಲಿ ಶನಿವಾರ ರಾತ್ರಿ ಹುಂಡಿ ಹಣ ಕಳವು ಮಾಡಲಾಗಿದೆ. ದೇವಾಲಯದ ಗ್ರಿಲ್ ಕಟ್ ಮಾಡಿ ಒಳನುಗ್ಗಿರುವ ಕಳ್ಳರು ಲಕ್ಷಾಂತರ ರೂ. ಕಾಣಿಕೆ (Kanike) ಹಣ ಕದ್ದೊಯ್ದಿದ್ದಾರೆ.

ಹುಂಡಿಯಲ್ಲಿ ಕಳೆದ 3 ವರ್ಷಗಳ ಹಣವಿತ್ತು ಎನ್ನಲಾಗಿದೆ. ಭಾನುವಾರ ಬೆಳಗ್ಗೆ ದೇವಾಲಯಕ್ಕೆ ಬಂದು ಬಾಗಿಲು ತೆಗೆದ ಅರ್ಚರಿಗೆ ಹುಂಡಿ ಬೀಗ ಒಡೆದಿರುವುದು ಕಂಡುಬಂದಿದೆ. ನಂತರ ಗೋಡೆಯ ಗ್ರಿಲ್ ಸಹ ಕಟ್ ಆಗಿರುವುದನ್ನು ಗಮನಿಸಿದ ಅರ್ಚಕರು ದೇವಸ್ಥಾನದ ಆಡಳಿತ ಮಂಡಳಿ ಗಮನಕ್ಕೆ ತಂದಿದ್ದರು.

Hundi-theft-at-Sri-Shaneshwara-temple-at-bhadravathi

ಹಳೇನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಶ್ವಾನದಳ ಕರೆಸಿ ಶೋಧಕಾರ್ಯ ನಡೆಸಿದರು.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಸಾಲದ ಕಂತು ಕಟ್ಟದ ಗ್ರಾಹಕನನ್ನು ಸಂಪರ್ಕಿಸಿದ ಬಜಾಜ್‌ ಫೈನಾನ್ಸ್‌ ಸಿಬ್ಬಂದಿಗೆ ಕಾದಿತ್ತು ಶಾಕ್‌, ದಾಖಲಾಯ್ತು ಕೇಸ್‌

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : June 9, 2025 at 10:30 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜೂನ್ 9, 2025

Leave a Comment