ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
HOLEHONNURU, 31 AUGUST 2024 : ಆಕಾಶ ಮೇಲೇರಿತು, ಸಿಡಿಲು ಸಿಡಿದೀತು ಎಚ್ಚರ.. ಇದು ಹೊಳೆಹೊನ್ನೂರು ಸಮೀಪದ ಮೈದೊಳಲು ಗ್ರಾಮದ ಹನುಮಂತ ದೇವರ ಕಾರ್ಣಿಕ (Karnika) ವಾಕ್ಯ.
ಪ್ರತಿ ವರ್ಷ ಶ್ರಾವಣ ಮಾಸದಲ್ಲಿ ಈ ದೇಗುಲದಲ್ಲಿ ಕಾರ್ಣಿಕೋತ್ಸವ ನಡೆಯಲಿದೆ. ಕಾರ್ಣಿಕ ವಾಕ್ಯ ಆಧರಿಸಿ ರೈತರು ವರ್ಷದ ಮಳೆ, ಬೆಳೆಯ ಅಂದಾಜು ಮಾಡುವುದು ವಾಡಿಕೆ. ಶುಕ್ರವಾರ ಈ ಬಾರಿಯ ಕಾರ್ಣಿಕೋತ್ಸವ ನಡೆಯಿತು. ಗೋದೂಳಿ ಲಗ್ನದಲ್ಲಿ ಗಂಗೆ ಪೂಜೆ ಬಳಿಕ ಪಿಳ್ಳೆಮಟ್ಟಿ ಗುಡ್ಡದಲ್ಲಿ ಎತ್ತರದ ಕಂಬವೇರಿದ ಗಣಮಗ ಕಾರಣಿಕ ನುಡಿದರು.
ಕಾರ್ಣಿಕದ ಅರ್ಥವೇನು?
ಆಕಾಶ ಮೇಲೇರಿತು, ಸಿಡಿಲು ಸಿಡಿದೀತು, ಎಚ್ಚರ ಎಂದು ಈ ಬಾರಿ ಕಾರ್ಣಿಕ ನುಡಿಯಲಾಗಿದೆ. ಈ ಬಾರಿ ಪ್ರಾಕೃತಿಕ ವಿಕೋಪಗಳು ಹೆಚ್ಚಾಗಲಿವೆ. ಸಿಡಿಲು ಬಡಿದು ಅನಾಹುತ ಸಂಭವಿಸಬಹುದು. ಆಕಾಶದ ಮೇಲುಗೈ ಸಾಧಿಸಬಹುದು. ಬಿಸಿಲು ಜೋರು ಇರಲಿದೆ ಎಂದು ಹಿರಿಯವು ವಿಶ್ಲೇಷಿಸುತ್ತಿದ್ದಾರೆ.

ಇದನ್ನೂ ಓದಿ ⇒ ದಿನ ಭವಿಷ್ಯ | 31 ಆಗಸ್ಟ್ 2024 | ಇವತ್ತು ಯಾವ್ಯಾವ ರಾಶಿಯವರಿಗೆ ಹೇಗಿದೆ?
LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು















