HOLEHONNURU, 31 AUGUST 2024 : ಆಕಾಶ ಮೇಲೇರಿತು, ಸಿಡಿಲು ಸಿಡಿದೀತು ಎಚ್ಚರ.. ಇದು ಹೊಳೆಹೊನ್ನೂರು ಸಮೀಪದ ಮೈದೊಳಲು ಗ್ರಾಮದ ಹನುಮಂತ ದೇವರ ಕಾರ್ಣಿಕ (Karnika) ವಾಕ್ಯ.
ಪ್ರತಿ ವರ್ಷ ಶ್ರಾವಣ ಮಾಸದಲ್ಲಿ ಈ ದೇಗುಲದಲ್ಲಿ ಕಾರ್ಣಿಕೋತ್ಸವ ನಡೆಯಲಿದೆ. ಕಾರ್ಣಿಕ ವಾಕ್ಯ ಆಧರಿಸಿ ರೈತರು ವರ್ಷದ ಮಳೆ, ಬೆಳೆಯ ಅಂದಾಜು ಮಾಡುವುದು ವಾಡಿಕೆ. ಶುಕ್ರವಾರ ಈ ಬಾರಿಯ ಕಾರ್ಣಿಕೋತ್ಸವ ನಡೆಯಿತು. ಗೋದೂಳಿ ಲಗ್ನದಲ್ಲಿ ಗಂಗೆ ಪೂಜೆ ಬಳಿಕ ಪಿಳ್ಳೆಮಟ್ಟಿ ಗುಡ್ಡದಲ್ಲಿ ಎತ್ತರದ ಕಂಬವೇರಿದ ಗಣಮಗ ಕಾರಣಿಕ ನುಡಿದರು.
ಕಾರ್ಣಿಕದ ಅರ್ಥವೇನು?
ಆಕಾಶ ಮೇಲೇರಿತು, ಸಿಡಿಲು ಸಿಡಿದೀತು, ಎಚ್ಚರ ಎಂದು ಈ ಬಾರಿ ಕಾರ್ಣಿಕ ನುಡಿಯಲಾಗಿದೆ. ಈ ಬಾರಿ ಪ್ರಾಕೃತಿಕ ವಿಕೋಪಗಳು ಹೆಚ್ಚಾಗಲಿವೆ. ಸಿಡಿಲು ಬಡಿದು ಅನಾಹುತ ಸಂಭವಿಸಬಹುದು. ಆಕಾಶದ ಮೇಲುಗೈ ಸಾಧಿಸಬಹುದು. ಬಿಸಿಲು ಜೋರು ಇರಲಿದೆ ಎಂದು ಹಿರಿಯವು ವಿಶ್ಲೇಷಿಸುತ್ತಿದ್ದಾರೆ.
ಇದನ್ನೂ ಓದಿ ⇒ ದಿನ ಭವಿಷ್ಯ | 31 ಆಗಸ್ಟ್ 2024 | ಇವತ್ತು ಯಾವ್ಯಾವ ರಾಶಿಯವರಿಗೆ ಹೇಗಿದೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200