‘VISL ಕುರಿತು ಈಗಾಗಲೇ ಮಹತ್ವದ ಸಭೆ ನಡೆಸಿದ್ದಾರೆ ಸಚಿವ ಕುಮಾರಸ್ವಾಮಿʼ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 21 JUNE 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

BHADRAVATHI : ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿ ಅಧಿಕಾರ ವಹಿಸಿಕೊಂಡ ಮರುದಿನವೆ ಹೆಚ್‌.ಡಿ.ಕುಮಾರಸ್ವಾಮಿ ಅವರು ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (VISL) ಪುನಶ್ಚೇತನ ಕುರಿತು ಅಧಿಕಾರಿಗಳ ಸಭೆ ನಡೆಸಿದ್ದಾರೆ. ಹಾಗಾಗಿ ಕುಮಾರಸ್ವಾಮಿ ಅವರ ಅವಧಿಯಲ್ಲಿ ಕಾರ್ಖಾನೆಗೆ ಅಗತ್ಯ ಬಂಡವಾಳ ಹೂಡಿಕೆ ಮಾಡುವ ವಿಶ್ವಾಸವಿದೆ ಎಂದು ಜೆಡಿಎಸ್‌ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರ ವಹಿಸಿಕೊಂಡ ಮರುದಿನವೆ ವಿಐಎಸ್‌ಎಲ್‌ ಕುರಿತು ಅಧಿಕಾರಿಗಳ ಸಭೆ ನಡೆಸಿರುವುದು ಅವರ ಕಾರ್ಯದಕ್ಷತೆಗೆ ಸಾಕ್ಷಿ. ಕಾರ್ಖಾನೆ ಬಂಡವಾಳ ಹಿಂತೆಗೆತ ನಿರ್ಧಾರ ವಿರೋಧಿಸಿ ಕಾರ್ಮಿಕರು ನಡೆಸುತ್ತಿರುವ ಹೋರಾಟ 500 ದಿನಗಳನ್ನು ಪೂರೈಸಿದೆ. ಈ ಹೋರಾಟದ ಸ್ಥಳಕ್ಕೆ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದರು. ಆಗ ಕಾರ್ಖಾನೆ ಉಳಿಸುವ ಭರವಸೆ ನೀಡಿದ್ದರು. ಈಗ ಅವರು ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿರುವುದು ಸಂತಸ ಮೂಡಿಸಿದೆ ಎಂದರು.

ಜೆಡಿಎಸ್‌ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಸತೀಶ್‌, ತಾಲೂಕು ಅಧ್ಯಕ್ಷ ಆರ್‌.ಕರುಣಾಮೂರ್ತಿ, ಪ್ರಮುಖರಾದ ನರಸಿಂಹಾಚಾರ್‌, ತಿಮ್ಮೇಗೌಡ, ರಾಮಕೃಷ್ಣ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿದ್ದರು.

ಇದನ್ನೂ ಓದಿ – ಮರದ ಕೆಳಗೆ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment