ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ ಗ್ರಾಮದ ಮಹೇಶ್ ನಾಯ್ಕ ಅವರ ಕೊಟ್ಟಿಗೆಯಲ್ಲಿದ್ದ ಕರುವನ್ನು (Calf) ಬುಧವಾರ ರಾತ್ರಿ ಚಿರತೆ ದಾಳಿ ಮಾಡಿ ಕೊಂದು ಹಾಕಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಗ್ರಾಮದ ಟಿವಿಎಸ್ ಫಾರಂ ತೋಟದ ಎಪಿಎಂಸಿ ಮಾಜಿ ಸದಸ್ಯೆ ಸುಜಾತಮ್ಮ ಮನೆ ಆವರಣದಲ್ಲಿ ಮಂಗಳವಾರ ಚಿರತೆಯು ಸಾಕು ನಾಯಿಗಳನ್ನು ಮತ್ತು ಬೆಕ್ಕನ್ನು ಅಪಹರಿಸಿತ್ತು. ಈಗ ಹಸುವನ್ನು ಕೊಂದಿದೆ. ಜಿ.ಪಂ. ಮಾಜಿ ಸದಸ್ಯ ಎಸ್. ಮಣಿಶೇಖರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳನ್ನು ಕರೆಯಿಸಿ, ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಇದನ್ನೂ ಓದಿ » ಯುವತಿಯ ಫೇಸ್ಬುಕ್ ರಿಕ್ವೆಸ್ಟ್ ಒಪ್ಪಿದ ಶಿವಮೊಗ್ಗದ ಉದ್ಯಮಿಗೆ ಮುಂದೆ ಕಾದಿತ್ತು ಶಾಕ್

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200