SHIVAMOGGA LIVE NEWS | 26 SEPTEMBER 2023
BHADRAVATHI : ವಿಐಎಸ್ಎಲ್ ಕಾರ್ಖಾನೆ ಆವರಣದಲ್ಲಿ ಚಿರತೆ (Leopard) ಸೆರೆಯಾಗಿದೆ. ಅರಣ್ಯ ಇಲಾಖೆ ಇಟ್ಟಿದ್ದ ಬೋನ್ನಲ್ಲಿ ಚಿರತೆ ಸೆರೆ ಸಿಕ್ಕಿದೆ. ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ವಿಐಎಸ್ಎಲ್ನ ಪೀಕಾಕ್ ಯಾರ್ಡ್ನಲ್ಲಿ ಅರಣ್ಯ ಇಲಾಖೆ ಬೋನ್ ಇರಿಸಿತ್ತು. ಅಲ್ಲಿ ಚಿರತೆ (Leopard) ಸೆರೆ ಸಿಕ್ಕಿದೆ. ಬೆಳಗ್ಗೆ ಕಾರ್ಮಿಕರು ಪೀಕಾಕ್ ಯಾರ್ಡ್ ಕಡೆ ಹೋದಾಗ ಚಿರತೆ ಸೆರೆಯಾಗಿರುವುದನ್ನು ಗಮನಿಸಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
ಇದನ್ನೂ ಓದಿ – ಭದ್ರಾವತಿ VISL ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷ, ಕಾರ್ಮಿಕರಲ್ಲಿ ಆತಂಕ
ಎರಡು ತಿಂಗಳ ಹಿಂದೆ ವಿಐಎಸ್ಎಲ್ನ ಬಿಜಿ ವೇಯಿಂಗ್ ಬ್ರಿಡ್ಜ್ ಸಮೀಪ ಚಿರತೆ ಪ್ರಯತ್ಯಕ್ಷವಾಗಿತ್ತು. ಕಾರ್ಮಿಕರು ಚಿರತೆಯ ವಿಡಿಯೋ ಚಿತ್ರೀಕರಣ ಮಾಡಿದ್ದರು. ಈ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿ ಬೋನ್ ಇರಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200