SHIVAMOGGA LIVE NEWS | 4 DECEMBER 2024
ಭದ್ರಾವತಿ : ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (VISL) ಪುನಶ್ಚೇತನಗೊಳಿಸಬೇಕು. ಗುತ್ತಿಗೆ ಕಾರ್ಮಿಕರಿಗೆ ಪೂರ್ಣ ಪ್ರಮಾಣದಲ್ಲಿ ಕೆಲಸ ಕಲ್ಪಿಸಿ ಅವರ ಹಿತರಕ್ಷಣೆ ಮಾಡುವಂತೆ ಯುವ ಕಾಂಗ್ರೆಸ್ನ ಮಾಜಿ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರಿಗೆ ಸುರಗಿತೋಪು ನಿವಾಸಿಗಳು ಮನವಿ ಮಾಡಿದರು. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
ಸುರಗಿತೋಪು ಚೌಡೇಶ್ವರಿ ದೇವಸ್ಥಾನಕ್ಕೆ ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಭೇಟಿ ನೀಡಿ ಚೌಡೇಶ್ವರಿ ದೇವಿಯ ದರ್ಶನ ಪಡೆದರು. ಈ ಸಂದರ್ಭ ಅವರನ್ನು ಭೇಟಿಯಾದ ಸ್ಥಳೀಯರು ವಿಐಎಸ್ಎಲ್ ಕುರಿತು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಬಿ.ವಿ.ಶ್ರೀನಿವಾಸ್, ಶೀಘ್ರದಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಚರ್ಚಿಸುವುದಾಗಿ ಭರವಸೆ ನೀಡಿದರು.
ಇದನ್ನೂ ಓದಿ » ‘ನಾನೇನು ಸನ್ಯಾಸಿಯಲ್ಲ, ಮೂರು ಬಾರಿ ಶಾಸಕನಾಗಿದ್ದೇನೆʼ
ದೇವಸ್ಥಾನದ ಪ್ರಧಾನ ಅರ್ಚಕ ಮುರಳೀಧರ, ಮುಖಂಡರಾದ ರಾಮಕೃಷ್ಣ, ಕಾಶಿ, ಉಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.