ಭದ್ರಾವತಿ: ಹುಚ್ಚು (Lunatic) ನಾಯಿಯ ಹಾವಳಿಯಿಂದ ಆತಂಕಕ್ಕೀಡಾದ ಗ್ರಾಮಸ್ಥರು ಬಡಿಗೆಗಳನ್ನು ಹಿಡಿದುಕೊಂಡು ರಸ್ತೆಯಲ್ಲಿ ಓಡಾಡುವಂತಾಗಿದೆ. ಭದ್ರಾವತಿ ತಾಲೂಕು ದಾಸರಕಲ್ಲಹಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆಯಿಂದ ಜನ ಬಡಿಗೆ ಸಾಹಿತ ಓಡಾಡುತ್ತಿದ್ದಾರೆ.
ಹುಚ್ಚು ನಾಯಿಯೊಂದು ಒಂಭತ್ತು ಮಕ್ಕಳು ಸೇರಿ ಹಲವರಿಗೆ ಕಡಿದಿದೆ. ಕೆಲವರು ನಾಯಿ ದಾಳಿ ತಪ್ಪಿಸಿಕೊಳ್ಳಲು ಓಡುವಾಗ ಬಿದ್ದು ಗಾಯಗೊಂಡಿದ್ದಾರೆ. ನಾಯಿ ಕಡಿತಕ್ಕೆ ಒಳಗಾದವರು ಮತ್ತು ಓಡಿ ಬಿದ್ದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ದನ, ಕರುಗಳ ಮೇಲು ಹುಚ್ಚು ನಾಯಿ ದಾಳಿ ನಡೆಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಬೆಳಗ್ಗೆಯಿಂದ ನಾಯಿಗಾಗಿ ಶೋಧ
ದಾಸರಕಲ್ಲಹಳ್ಳಿ ಗ್ರಾಮಸ್ಥರು, ಮಕ್ಕಳು ಬೆಳಗ್ಗೆಯಿಂದ ಬಡಿಗೆಗಳನ್ನು ಹಿಡಿದುಕೊಂಡು ಹುಚ್ಚು ನಾಯಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ ನಾಯಿ ಈತನಕ ಸಿಕ್ಕಿಲ್ಲ. ಕೂಡಲೆ ಅಧಿಕಾರಿಗಳು ನಾಯಿ ಹಿಡಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ » ಹುಲಿಕಲ್ ಘಾಟಿ, ಹೇರ್ ಪಿನ್ ತಿರುವಿನಲ್ಲಿ ಕೆಟ್ಟು ನಿಂತ ಲಾರಿ, ಕಿ.ಮೀ. ಉದ್ದಕ್ಕೆ ಟ್ರಾಫಿಕ್ ಜಾಮ್

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200