ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

Published On : ಮಾರ್ಚ್ 29, 2026

Published By : ನಿತಿನ್‌ ಆರ್‌.ಕೈದೊಟ್ಲು 

Sunrise Facility Services, Sri sai Trust Shimoga

ಹೊಳೆಹೊನ್ನೂರು: ಮೈದೊಳಲಿನಲ್ಲಿ ಶನಿವಾರ ಆಂಜನೇಯ ಸ್ವಾಮಿಯ ಬ್ರಹ್ಮ ರಥೋತ್ಸವ (Rathotsava) ಹಾಗೂ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.

ಮಂಗಳವಾರ ಕೊಡಿ ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಬಳಿ ಕೆಂಡಾರ್ಚನೆಯೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಗುರುವಾರ ಉಚ್ಚಯ್ಯ ಉತ್ಸವ, ಶುಕ್ರವಾರ ಮುಂಜಾನೆ ನಡೆದ ರಥೋತ್ಸವದಲ್ಲಿ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿ ರಥ ಎಳೆದು ಭಕ್ತಿ ಸಮರ್ಪಿಸಿದರು. ಇಷ್ಟಾರ್ಥ ಸಿದ್ಧಿಗಾಗಿ ಕೆಲವರು ರಥದ ಕಳಸಕ್ಕೆ ಬಾಳೆಹಣ್ಣು ಎಸೆದರು.

Mydolalu-Anjaneya-Swamy-ratotsava

ಹರಕೆ ಹೊತ್ತವರು ಮಕ್ಕಳ ಜವಳ ತೆಗೆಸಿ ಭಕ್ತಿ ಸಮರ್ಪಿಸಿ, ಹರಕೆ ಕಾಣಿಕೆಗಳನ್ನು ತೀರಿಸಿದರು. ಡೊಳ್ಳು, ತಮಟೆ, ವೀರಗಾಸೆ ನೃತ್ಯ ಮೇಳಗಳು ರಾಜಬೀದಿ ಉತ್ಸವಕ್ಕೆ ಮೆರುಗು ನೀಡಿದವು. ಗ್ರಾಮಸ್ಥರು ಭಕ್ತರಿಗೆ ಕೋಸಂಬರಿ, ಪಾನಕ ಹಂಚಿದರು. ಶನಿವಾರ ಸಂಜೆ ಗ್ರಾಮದ ಗಡಿಗೆ ಚರಗ ಚೆಲ್ಲುವುದರೊಂದಿಗೆ ರಥೋತ್ಸವ ಮುಕ್ತಾಯವಾಯಿತು. ಆಂಜನೇಯ ಸ್ವಾಮಿ ಸೇವಾ ಸಮಿತಿ ಜಾತ್ರಾ ಮಹೋತ್ಸವನ್ನು ನಿರ್ವಹಿಸಿತು.

ಇದನ್ನೂ ಓದಿ – ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 29, 2026

Leave a Comment