ಶಿವಮೊಗ್ಗ ವಿಮಾನ ನಿಲ್ದಾಣ ಹೆಸರು ಸಂಬಂಧ ಭದ್ರಾವತಿ ತಹಶೀಲ್ದಾರ್ ಮೂಲಕ ಸಿಎಂಗೆ ಮನವಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 ಮಾರ್ಚ್ 2022

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ಇಡಬೇಕು ಎಂದು ವೀರಶೈವ-ಲಿಂಗಾಯಿತ ಸಮುದಾಯದ ಮುಖಂಡರು ಮನವಿ ಸಲ್ಲಿಸಿದ್ದಾರೆ.

Shimoga Nanjappa Hospital

ಭದ್ರಾವತಿ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಗ್ರೇಡ್-2 ರಂಗಮ್ಮ ಅವರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ದಕ್ಷ ಆಡಳಿತ ನೀಡಿದ್ದಾರೆ. ಅಭಿವೃದ್ಧಿಯ ಹರಿಕಾರರಾಗಿ ಸಾಮಾಜಿಕ ನ್ಯಾಯ ನೀಡಿದ್ದಾರೆ. ಅವರ ಶ್ರಮದ ಫಲವಾಗಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ. ಅವರ ಕೀರ್ತಿ ನಾಡಿನೆಲ್ಲೆಡೆ ಶಾಶ್ವತವಾಗಿರಲು ವಿಮಾನ ನಿಲ್ದಾಣಕ್ಕೆ ಅವರ ಹೆಸರು ನಾಮಕರಣ ಮಾಡುವುದೇ ಸಮಂಜಸವಾಗಿದೆ ಎಂದು ತಿಳಿಸಿದರು.

ವಿಮಾನ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ನಾಮಕರಣ ಮಾಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು.

ವೀರಶೈವ ಸಮುದಾಯಗಳ ಮುಖಂಡರಾದ ನಗರಸಭ ಅಧ್ಯಕ್ಷೆ ಗೀತಾ ರಾಜಕುಮಾರ್, ಬಿ.ಕೆ.ಮೋಹನ್, ನಂದಿನಿ ಮಲ್ಲಿಕಾರ್ಜುನ, ಆರ್.ಮಹೇಶ್ ಕುಮಾರ್, ಮಹೇಶ್‌ ಕುಮಾರ್, ವಾಗೀಶ್, ರವಿ, ಮಂಜು, ಆರ್.ಎಸ್.ಶೋಭಾ ಮುಂತಾದವರಿದ್ದರು.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಇದನ್ನೂ ಓದಿ | ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರು ಕುರಿತು ಜಿಲ್ಲೆಯ ಜನ ಪ್ರತಿನಿಧಿಗಳಿಂದ ಸಿಎಂಗೆ ಮನವಿ

ಇದನ್ನೂ ಓದಿ | ‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರನ್ನೇಕೆ ಇಡಬಾರದು?’

ಈ ಮೇಲ್ – shivamoggalive@gmail.com

WhatsApp Number – 7411700200

JNNCE VTU exams

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment