VISL ಕಾರ್ಖಾನೆ ವಿಚಾರ, ದೆಹಲಿಗೆ ನಿಯೋಗ, 2 ಪ್ರಮುಖ ಬೇಡಿಕೆ ಈಡೇರಿಕೆಗೆ ಉಕ್ಕು ಪ್ರಾಧಿಕಾರಕ್ಕೆ ಒತ್ತಾಯ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 12 FEBRUARY 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

BHADRAVATHI : ವಿಐಎಸ್‌ಎಲ್‌ ಕಾರ್ಖಾನೆ ಮುಚ್ಚಲು ಆದೇಶಿಸಿರುವ ಉಕ್ಕು ಪ್ರಾಧಿಕಾರ ತನ್ನ ನಿಲುವು ಬದಲಿಸಬೇಕು. ಕಾರ್ಖಾನೆಯನ್ನು ಉಳಿಸಬೇಕು ಎಂದು ವಿಐಎಸ್‌ಎಲ್‌ ನಿವೃತ್ತ ಕಾರ್ಮಿಕ ಕಲ್ಯಾಣ ಕೇಂದ್ರವು ದಿಲ್ಲಿಗೆ ನಿಯೋಗ ತೆರಳಿ ಉಕ್ಕು ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿ ಸಲ್ಲಿಸಿದೆ.

ಉಕ್ಕು ಪ್ರಾಧಿಕಾರದ ಅಧ್ಯಕ್ಷ ಅಮರೇಂದು ಪ್ರಕಾಶ್‌ ಅವರನ್ನು ಭೇಟಿಯಾದ ನಿಯೋಗ ಮನವಿ ಸಲ್ಲಿಸಿದೆ.

ನಿಯೋಗದ ಮನವಿ ಏನು?

ಬೇಡಿಕೆ 1

ಈ ಹಿಂದೆ ಕಾರ್ಖಾನೆಗೆ ಆಗಮಿಸಿ ವೀಕ್ಷಿಸಿದ್ದ ಕೇಂದ್ರ ಉಕ್ಕು ಸಚಿವರು ಅಗತ್ಯ ಬಂಡವಾಳ ತೊಡಗಿಸಿ ಕಾರ್ಖಾನೆ ಅಭಿವೃದ್ಧಿ ಹಾಗೂ ಪುನಶ್ಚೇತನದ ಭರವಸೆ ನೀಡಿದ್ದರು. ಅಂತೆಯೆ ಬಂಡವಾಳ ಹೂಡಿಕೆ ಮಾಡಬೇಕು.

ಬೇಡಿಕೆ 2

ಕಾರ್ಖಾನೆಯ ವಸತಿ ಗೃಹಗಳನ್ನು ಪುನಃ ದೀರ್ಘಾವಧಿ ಬಾಡಿಗೆ ಆಧಾರದಡಿ ವಿತರಣೆ ಮಾಡಬೇಕು. 1998ರ ನಡುವೆ ನಿವೃತ್ತಿ ಹೊಂದಿರುವ ಕಾರ್ಮಿಕರಿಗೆ ವೈದ್ಯಕೀಯ ಭತ್ಯೆ ಯೋಜನೆ ಜಾರಿ ಮಾಡಬೇಕು.

ವಿಐಎಸ್‌ಎಲ್‌ ನಿವೃತ್ತ ಕಾರ್ಮಿಕ ಕಲ್ಯಾಣ ಕೇಂದ್ರದ ಅಧ್ಯಕ್ಷ ಬಿ.ಜಿ.ರಾಮಲಿಂಗಯ್ಯ, ಉಪಾಧ್ಯಕ್ಷ ಎಸ್‌.ಅಡವೀಶಯ್ಯ, ಕಾರ್ಯದರ್ಶಿ ಮಂಜುನಾಥ್‌ ಸೇರಿದಂತೆ ಹಲವರು ನಿಯೋಗದಲ್ಲಿದ್ದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಅಡಿಕೆ ತೋಟಕ್ಕೆ ಬೆಂಕಿ, ಗಿಡಗಳು ಭಸ್ಮ | ರಾತ್ರೋರಾತ್ರಿ ರಾಯಲ್‌ ಎನ್‌ಫೀಲ್ಡ್‌ ಬೈಕ್‌ ನಾಪತ್ತೆ – ಫಟಾಫಟ್‌ ನ್ಯೂಸ್‌

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment