ಶಿವಮೊಗ್ಗ ಲೈವ್.ಕಾಂ | 3 ಮಾರ್ಚ್ 2019
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಗಣಿ ಮಂಜೂರು ಮಾಡಿಸಿದರೆ ವಿಎಐಎಸ್ಎಲ್’ಗೆ ಬಂಡಾವಳ ಹಾಕುತ್ತೇವೆ, ಕಾರ್ಖಾನೆಯನ್ನು ಪುನಾರಂಭ ಮಾಡಿಸುತ್ತೇವೆ ಎಂದು ಭಾಷಣ ಮಾಡಿದ ಬಿಜೆಪಿ ಮಂತ್ರಿಗಳು ಮತ್ತು ಸಂಸದರು, ಈವರೆಗೂ ಕಾರ್ಖಾನೆಗಾಗಿ ಏನನ್ನೂ ಮಾಡಿಲ್ಲ ಎಂದು ಭದ್ರಾವತಿ ಶಾಸಕ ಸಂಗಮೇಶ್ವರ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಐಎಸ್ಎಲ್ ಕಾರ್ಖಾನೆಗೆ ಗಣಿ ಮಂಜೂರಾಗಿದೆ. ಕೇಂದ್ರದ ಒಪ್ಪಿಗೆ ಸಿಕ್ಕಿದೆ. ಈಗ ಕಾರ್ಖಾನೆಯನ್ನು ಆರಂಭಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಗುತ್ತಿಗೆ ಕಾರ್ಮಿಕರಿಗೆ 26 ದಿನ ಕೆಲಸ ನೀಡಬೇಕು ಎಂಬ ಹೋರಾಟಕ್ಕೆ ತಮ್ಮ ಬೆಂಬಲವಿದೆ ಎಂದರು.
ಎಂಪಿಎಂ ಆರಂಭಕ್ಕೆ ನಡೆಯುತ್ತಿದೆ ಪ್ರಯತ್ನ

ಎಂಪಿಎಂ ಕಾರ್ಖಾನೆಯ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನು ಕೊಡಿಸುವಲ್ಲಿ ಸಫಲರಾಗಿರುವುದಾಗಿ ತಿಳಿಸಿದ ಸಂಗಮೇಶ್ವರ್, ಕಾರ್ಖಾನೆ ಆರಂಭಕ್ಕೆ ಪ್ರಯತ್ನಿಸುತ್ತಿರುವುದಾಗಿ ಸ್ಪಷ್ಟಪಡಿಸಿದರು. ಲೀಸ್ ಆಧಾರದ ಮೇಲೆ ಕಾರ್ಖಾನೆ ಶುರು ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಮುಖಂಡ ಚಂದ್ರೆಗೌಡ, ಹೆಚ್.ಎಲ್.ಷಡಾಕ್ಷರಿ, ರಾಮೇಗೌಡ, ಶ್ರೀನಿವಾಸ್, ಬಿ.ಟಿ.ನಾಗರಾಜ್, ಖಲೀಲ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






