SHIVAMOGGA LIVE NEWS | 18 DECEMBER 2022
ಭದ್ರಾವತಿ : ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದ ವೃದ್ಧೆಯೊಬ್ಬಳ (murder in temple) ಉಸಿರಗಟ್ಟಿಸಿ ಕೊಲೆ ಮಾಡಿ, ಆಕೆಯ ಮೂಗುತಿ, ಓಲೆ ಕದ್ದೊಯ್ದಿದ್ದ ಆರೋಪಿಯನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಸಣ್ಣ ಸಾಕ್ಷಿಯು ಇಲ್ಲದ ಪ್ರಕರಣವನ್ನು ಭೇದಿಸಿ, ಆರೋಪಿಯನ್ನು ಜೈಲಿಗಟ್ಟಲಾಗಿದೆ.
ಭದ್ರಾವತಿ ತಾಲೂಕು ಸುಣ್ಣದ ಹಳ್ಳಿಯ ವೃದ್ಧೆ ಶಂಕ್ರಮ್ಮ (70) ಮೃತರು. ಗ್ರಾಮದ ಶ್ರೀ ಅಂತರ ಘಟ್ಟಮ್ಮ ದೇವಸ್ಥಾನದ ಕಾಂಪೌಂಡ್ ಒಳಗೆ ಶಂಕ್ರಮ್ಮ ಅವರನ್ನು ಉಸಿರುಗಟ್ಟಿಸಿ ಕೊಲೆ (murder in temple) ಮಾಡಲಾಗಿತ್ತು.
ಮೂಗುತಿ, ಓಲೆಗಾಗಿ ಕೊಲೆ
ಸುಣ್ಣದ ಹಳ್ಳಿಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಮುಂದೆ ಶಂಕ್ರಮ್ಮ ಭಿಕ್ಷೆ ಬೇಡುತ್ತಿದ್ದರು. ಅದರಿಂದ ಬಂದ ಹಣದಲ್ಲಿ ಜೀವನ ನಡೆಸುತ್ತಿದ್ದರು. ಅಂತರ ಘಟ್ಟಮ್ಮ ದೇವಸ್ಥಾನದ ಕಾಂಪೌಂಡ್ ಒಳಗೆ ನಿತ್ಯ ಮಲಗುತ್ತಿದ್ದರು. ಡಿ.3ರಂದು ಶಂಕ್ರಮ್ಮ ಮೃತಪಟ್ಟಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪರಿಶೀಲನೆ ನಡೆಸಿದಾಗ ಕೊಲೆಯಾಗಿರುವುದು ಗೊತ್ತಾಗಿತ್ತು.
ತನಿಖೆ ನಡೆಸಿದ ಪೊಲೀಸರು ಉಡುಪಿ ಜಿಲ್ಲೆ ಕುಂದಾಪುರ ಸಮೀಪದ ದುಗ್ಗದ ಮನೆ ನಿವಾಸಿ ಕರುಣಾಕರ ದೇವಾಡಿಗ (24) ಎಂಬಾತನನ್ನು ಬಂಧಿಸಿದ್ದಾರೆ. ಶಂಕ್ರಮ್ಮನ ಕಿವಿಯಲ್ಲಿದ್ದ ಓಲೆ, ಮೂಗುತಿಗಾಗಿ ಆಕೆಯ ಕೊಲೆ ಮಾಡಿದ್ದ. ಹತ್ಯೆ ಬಳಿಕ 14 ಸಾವಿರ ಮೌಲ್ಯದ ಓಲೆ, ಮೂಗುತಿಯನ್ನು ಕದ್ದೊಯ್ದಿದ್ದ. ಸಣ್ಣ ಸುಳಿವು ಇಲ್ಲದ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಓಲೆ, ಮೂಗುತಿ ಸಹಿತ ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ – ಮೈಸೂರಿನಿಂದ ಸಿಗಂದೂರಿಗೆ ತೆರಳುತ್ತಿದ್ದ ಇನ್ನೋವಾ ಕಾರು, ಲಾರಿ ಮಧ್ಯೆ ಭೀಕರ ಅಪಘಾತ
ಭದ್ರಾವತಿ ಎಎಎಸ್ಪಿ ಜಿತೇಂದ್ರಕುಮಾರ್ ದಯಾಮ ಅವರ ಮೇಲ್ವಿಚಾರಣೆಯಲ್ಲಿ ಪೇಪರ್ ಟೌನ್ ಠಾಣೆ ಇನ್ಸ್ ಪೆಕ್ಟರ್ ಇ.ಒ. ಮಂಜುನಾಥ್ ಅವರ ನೇತೃತ್ವದಲ್ಲಿ ಪಿಎಸ್ಐ ಶಿಲ್ಪಾ ನಾಯನೇಗಲಿ ಅವರ ತಂಡ ತನಿಖೆ ನಡೆಸಿತ್ತು. ಸಿಬ್ಬಂದಿ ರತ್ನಾಕರ, ವಾಸುದೇವ, ಚಿನ್ನ ನಾಯ್ಕ, ಹನಮಂತ ಅವಟಿ, ಆದರ್ಶ ಶೆಟ್ಟಿ, ಮೌನೇಶ ಶೀಖಲ್, ಅರುಣ್ ಆರ್, ವಿಕ್ರಮ್ ಅವರ ತಂಡ ಆರೋಪಿಯನ್ನು ಬಂಧಿಸಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200