SHIVAMOGGA LIVE NEWS | 11 OCTOBER 2023
BHADRAVATHI : ನವರಾತ್ರಿ ಸಂದರ್ಭ ಭದ್ರಾವತಿ ಎಫ್.ಎಂ.ನಲ್ಲಿ ಪ್ರತಿದಿನ ಬೆಳಿಗ್ಗೆ 9.30 ರಿಂದ 10 ಗಂಟೆವರೆಗೆ ರಾಜ್ಯದ ಒಂಭತ್ತು ದೇವಿಯರ ಪರಿಚಯ ಕಾರ್ಯಕ್ರಮ ಪ್ರಸಾರವಾಗಲಿದೆ. ಆಯಾ ದೇವಾಲಯದ ಇತಿಹಾಸ ಮತ್ತು ಮಹತ್ವ ಕುರಿತು ವಿಶೇಷ ಪರಿಚಯಾತ್ಮಕ ಕಾರ್ಯಕ್ರಮ ಪ್ರಸಾರವಾಗಲಿದೆ.
ಬಾದಾಮಿ ಬನಶಂಕರಿ, ಹೊರನಾಡ ಅನ್ನಪೂರ್ಣೇಶ್ವರಿ, ಹಾಸನದ ಹಾಸನಾಂಬ, ಸಿಗಂದೂರಿನ ಚೌಡೇಶ್ವರಿ, ಕೊಲ್ಲೂರಿನ ಮೂಕಾಂಬಿಕೆ, ಶಿರಸಿಯ ಮಾರಿಕಾಂಬಾ, ಕಟೀಲಿನ ದುರ್ಗಾ ಪರಮೇಶ್ವರಿ, ಶೃಂಗೇರಿಯ ಶಾರದಾಂಬೆ, ಮೈಸೂರಿನ ಚಾಮುಂಡೇಶ್ವರಿ ಕುರಿತ ವಿಶೇಷ ಕಾರ್ಯಕ್ರಮ ಪ್ರಸಾರವಾಗಲಿದೆ.
ಇದನ್ನೂ ಓದಿ- ಶಿವಮೊಗ್ಗ ದಸರಾ, ಜಾನಪದ ಗೀತೆ ಸ್ಪರ್ಧೆ, ಕವಿಗೋಷ್ಠಿಗೆ ಹೆಸರೂ ನೋಂದಣಿಗೆ ಸೂಚನೆ
ವಿಶ್ವದಾದ್ಯಂತ ಪ್ರಸಾರಭಾರತಿ ‘newsonair’ ಆ್ಯಪ್ನಲ್ಲಿ ಭದ್ರಾವತಿ ಕೇಂದ್ರ ಮೂಲಕ ಸಹ ಪ್ರಸಾರ ಸಮಯದಲ್ಲಿ ಕೇಳಬಹುದು. ಪ್ರಸಾರ ನಂತರ ಆಕಾಶವಾಣಿ ಭದ್ರಾವತಿ ಯೂಟ್ಯೂಬ್ ಚಾನಲ್ನಲ್ಲಿ ಕೇಳಬಹುದು. ಕೇಳುಗರು ಈ ಕುರಿತು ತಮ್ಮ ಅಭಿಪ್ರಾಯ ಅನಿಸಿಕೆಗಳನ್ನು ವಾಟ್ಸಾಪ್ ಸಂಖ್ಯೆ: 9481572600 ಮುಖಾಂತರ ಹಂಚಿಕೊಳ್ಳಬಹುದು ಎಂದು ಆಕಾಶವಾಣಿ ಭದ್ರಾವತಿ ಕಾರ್ಯಕ್ರಮ ಮುಖ್ಯಸ್ಥ ಎಸ್.ಆರ್.ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200