ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
BHADRAVATHI, 31 JULY 2024 : ಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊಳೆಗೆ ಹರಿಸುತ್ತಿರುವುದರಿಂದ ಭದ್ರಾವತಿಯ ಹೊಸ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಸೇತುವೆ ಮೇಲೆ ನೀರು ರಭಸವಾಗಿ ಹರಿದು ಹೋಗುತ್ತಿದೆ.
ಭದ್ರಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಪೊಲೀಸರು ಹೊಸ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧಿಸಿದ್ದರು. ಸೇತುವೆಯ ಎರಡು ಬದಿಯಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿತ್ತು. ಇವತ್ತು ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದ್ದು, ಸೇತುವೆ ಮೇಲೆ ಭಾರಿ ಪ್ರಮಾಣದ ನೀರು ಹರಿಯುತ್ತಿದೆ. ಮರದ ದಿಮ್ಮಿಗಳು ಸೇತುವೆಗೆ ಬಡಿದು, ಸಿಲುಕಿಕೊಂಡಿವೆ.
ಸೇತುವೆ ನೋಡಲು ಜನವೋ ಜನ
ಇನ್ನು, ಸೇತುವೆ ಮೇಲೆ ನೀರು ಹರಿದು ಹೋಗುತ್ತಿರುವುದನ್ನು ನೋಡಲು ಭದ್ರಾವತಿ ಪಟ್ಟಣದ ವಿವಿಧೆಡೆಯ ಜನರು ಸೇತುವೆ ಬಳಿ ಆಗಮಿಸುತ್ತಿದ್ದಾರೆ. ಫೋಟೊ, ವಿಡಿಯೋ ಕ್ಲಿಕ್ಕಿಸುತ್ತಿದ್ದಾರೆ. ಜನರು ಬ್ಯಾರಿಕೇಡ್ ದಾಟಿ ಹೋಗದಂತೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಬಡಾವಣೆಗಳು ಜಲಾವೃತ, ಕಾಳಜಿ ಕೇಂದ್ರ ಆರಂಭ
ಇನ್ನು, ಭದ್ರಾ ನದಿ ಪಾತ್ರದ ವಿವಿಧ ಬಡಾವಣೆಗಳಿಗೆ ನೀರು ನುಗ್ಗಿದೆ. ಮನೆಗಳು ಜಲಾವೃತವಾಗಿವೆ. ಗುಂಡೂರಾವ್ ಶೆಡ್, ಕಾವಲ್ ಗುಂದಿ ಏರಿಯಾ, ಅಂಬೇಡ್ಕರ್ ನಗರ, ಗೌಳಿಗರ ಬೀದಿ ಸೇರಿದಂತೆ ವಿವಿಧೆಡೆ ನೀರು ನುಗ್ಗಿದೆ. ಈ ಹಿನ್ನೆಲೆ ನಗರಸಭೆ ವತಿಯಿಂದ ಮೂರು ಕಾಳಜಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಸದ್ಯ ಒಂದು ಕಾಳಜಿ ಕೇಂದ್ರದಲ್ಲಿ ಮಾತ್ರ ಜನರಿದ್ದಾರೆ. ಒಕ್ಕಲಿಗರ ಸಭಾ ಭವನದಲ್ಲಿ ಕಾಳಜಿ ಕೇಂದ್ರದಲ್ಲಿ 32 ಕುಟುಂಬಗಳ 121 ಜನರನ್ನು ರಕ್ಷಿಸಲಾಗಿದೆ. ಅವರಿಗೆ ಬೆಳಗಿನ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ. ಸೋಪು, ಪೇಸ್ಟ್, ಬೆಡ್ ಶೀಟ್ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ ⇓
ತುಂಗಾ, ಭದ್ರಾ ಜಲಾಶಯಗಳ ಒಳ ಹರಿವು ಹೆಚ್ಚಳ, ಭಾರಿ ಪ್ರಮಾಣದ ನೀರು ಹೊರಕ್ಕೆ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















