BHADRAVATHI, 31 JULY 2024 : ಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊಳೆಗೆ ಹರಿಸುತ್ತಿರುವುದರಿಂದ ಭದ್ರಾವತಿಯ ಹೊಸ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಸೇತುವೆ ಮೇಲೆ ನೀರು ರಭಸವಾಗಿ ಹರಿದು ಹೋಗುತ್ತಿದೆ.
ಭದ್ರಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಪೊಲೀಸರು ಹೊಸ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧಿಸಿದ್ದರು. ಸೇತುವೆಯ ಎರಡು ಬದಿಯಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿತ್ತು. ಇವತ್ತು ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದ್ದು, ಸೇತುವೆ ಮೇಲೆ ಭಾರಿ ಪ್ರಮಾಣದ ನೀರು ಹರಿಯುತ್ತಿದೆ. ಮರದ ದಿಮ್ಮಿಗಳು ಸೇತುವೆಗೆ ಬಡಿದು, ಸಿಲುಕಿಕೊಂಡಿವೆ.
![]() |
ಸೇತುವೆ ನೋಡಲು ಜನವೋ ಜನ
ಇನ್ನು, ಸೇತುವೆ ಮೇಲೆ ನೀರು ಹರಿದು ಹೋಗುತ್ತಿರುವುದನ್ನು ನೋಡಲು ಭದ್ರಾವತಿ ಪಟ್ಟಣದ ವಿವಿಧೆಡೆಯ ಜನರು ಸೇತುವೆ ಬಳಿ ಆಗಮಿಸುತ್ತಿದ್ದಾರೆ. ಫೋಟೊ, ವಿಡಿಯೋ ಕ್ಲಿಕ್ಕಿಸುತ್ತಿದ್ದಾರೆ. ಜನರು ಬ್ಯಾರಿಕೇಡ್ ದಾಟಿ ಹೋಗದಂತೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಬಡಾವಣೆಗಳು ಜಲಾವೃತ, ಕಾಳಜಿ ಕೇಂದ್ರ ಆರಂಭ
ಇನ್ನು, ಭದ್ರಾ ನದಿ ಪಾತ್ರದ ವಿವಿಧ ಬಡಾವಣೆಗಳಿಗೆ ನೀರು ನುಗ್ಗಿದೆ. ಮನೆಗಳು ಜಲಾವೃತವಾಗಿವೆ. ಗುಂಡೂರಾವ್ ಶೆಡ್, ಕಾವಲ್ ಗುಂದಿ ಏರಿಯಾ, ಅಂಬೇಡ್ಕರ್ ನಗರ, ಗೌಳಿಗರ ಬೀದಿ ಸೇರಿದಂತೆ ವಿವಿಧೆಡೆ ನೀರು ನುಗ್ಗಿದೆ. ಈ ಹಿನ್ನೆಲೆ ನಗರಸಭೆ ವತಿಯಿಂದ ಮೂರು ಕಾಳಜಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಸದ್ಯ ಒಂದು ಕಾಳಜಿ ಕೇಂದ್ರದಲ್ಲಿ ಮಾತ್ರ ಜನರಿದ್ದಾರೆ. ಒಕ್ಕಲಿಗರ ಸಭಾ ಭವನದಲ್ಲಿ ಕಾಳಜಿ ಕೇಂದ್ರದಲ್ಲಿ 32 ಕುಟುಂಬಗಳ 121 ಜನರನ್ನು ರಕ್ಷಿಸಲಾಗಿದೆ. ಅವರಿಗೆ ಬೆಳಗಿನ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ. ಸೋಪು, ಪೇಸ್ಟ್, ಬೆಡ್ ಶೀಟ್ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ ⇓
ತುಂಗಾ, ಭದ್ರಾ ಜಲಾಶಯಗಳ ಒಳ ಹರಿವು ಹೆಚ್ಚಳ, ಭಾರಿ ಪ್ರಮಾಣದ ನೀರು ಹೊರಕ್ಕೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200