ಚಾಕು, ಲಾಂಗ್‌, ವಿಕೆಟ್‌ ಹಿಡಿದು ಭದ್ರಾವತಿಯಲ್ಲಿ ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್‌ ಮೇಲೆ ಪೊಲೀಸ್‌ ದಾಳಿ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

ಭದ್ರಾವತಿ: ಚಾಕು, ಲಾಂಗ್‌, ವಿಕೆಟ್‌ ಹಿಡಿದು ನಡುರಾತ್ರಿ ವಾಹನಗಳನ್ನು ಅಡ್ಡಗಟ್ಟಿ ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್‌ ಒಂದನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಶಿವರಾಮ ನಗರ ಮತ್ತು ಮಾಚೇನಹಳ್ಳಿ ನಡುವೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಅರೆಸ್ಟ್‌ (Arrest) ಮಾಡಿದ್ದಾರೆ.

ಲೋಕೇಶ್‌, ಅಕಾಶ್‌, ಸುಂದರ್‌, ಸುಜಿತ್‌, ದಿಲೀಪ್‌ ಬಂಧಿತರು. ರಸ್ತೆಯಲ್ಲಿ ಓಮ್ನಿ ಕಾರು ನಿಲ್ಲಿಸಿಕೊಂಡು ಮಾರಕಾಸ್ತ್ರ ಹಿಡಿದು ದರೋಡೆಗೆ ಹೊಂಚು ಹಾಕುತ್ತಿದ್ದರು. ಪೊಲೀಸರು ದಾಳಿ ನಡೆಸಿದಾಗ ಐವರು ಪರಾರಿಯಾಗಲು ಯತ್ನಿಸಿದ್ದರು.

ಮಜಾ ಮಾಡೋಕೆ ದರೋಡೆ ಪ್ಲಾನ್‌

ಆರೋಪಿಗಳು ಭದ್ರಾವತಿಯ ವಿವಿಧೆಡೆ ದನಗಳ್ಳತನ ಮಾಡಿದ್ದರು. ಅವುಗಳ ಮಾರಾಟದಿಂದ ಬಂದ ಹಣದಲ್ಲಿ ಮಜಾ ಮಾಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪೊಲೀಸರಿಗೆ ಅನುಮಾನ ಬಂದ ಹಿನ್ನೆಲೆ ದನಗಳ್ಳತನ ಬಿಟ್ಟು ದರೋಡೆಗೆ ಹೊಂಚು ಹಾಕಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆ ಸಂಬಂಧ ನ್ಯೂ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಆನಂದಪುರದಲ್ಲಿ ಕಸ ವಿಲೇವಾರಿ ಘಟಕಕ್ಕೆ ಬೆಂಕಿ, ಧಗಧಗ ಹೊತ್ತಿ ಉರಿದ ಲಕ್ಷಾಂತರ ಮೌಲ್ಯದ ವಸ್ತುಗಳು

Leave a Comment