ಡೆತ್‌ನೋಟ್‌ ಬರೆದು ನವವಿವಾಹಿತೆ ನಾಪತ್ತೆ, ಭದ್ರಾ ನಾಲೆಯಲ್ಲಿ ಶೋಧ ಕಾರ್ಯಾಚರಣೆ

 ಶಿವಮೊಗ್ಗ  LIVE 

ಹೊಳೆಹೊನ್ನೂರು: ವಾಟ್ಸಪ್‌ನಲ್ಲಿ ಡೆತ್‌ನೋಟ್‌ ಬರೆದು ನವವಿವಾಹಿತೆ ನಾಪತ್ತೆಯಾಗಿದ್ದಾರೆ. ಆಕೆಗಾಗಿ ಭದ್ರಾ ನಾಲೆಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಲತಾ.ಪಿ, ಡೆತ್‌ ನೋಟ್‌ ಬರೆದಿಟ್ಟು ನಾಪತ್ತೆಯಾಗಿದ್ದಾರೆ. ಭದ್ರಾವತಿ ತಾಲೂಕು ಹಂಚಿನ ಸಿದ್ಧಾಪುರ ಬಳಿ ಭದ್ರಾ ನಾಲೆಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ವಾಟ್ಸಪ್‌ನಲ್ಲಿ ಡೆತ್‌ನೋಟ್‌ ಪತ್ತೆ

ವಾಟ್ಸಪ್‌ನಲ್ಲಿ ಲತಾ ಅವರು ಬರೆದಿದ್ದಾರೆ ಎನ್ನಲಾದ ಡೆತ್‌ ನೋಟ್‌ ಪತ್ತೆಯಾಗಿದೆ. ಇದರಲ್ಲಿ ಪತಿ ಸೇರಿ ಐವರ ವಿರುದ್ಧ ಕಿರುಕುಳದ ಆರೋಪ ಮಾಡಲಾಗಿದೆ. ‘ನಾನು ಮತ್ತೆ ನಮ್ಮ ಮನೆಯಲ್ಲೇ ಹುಟ್ಟಿ ಬರುತ್ತೇನೆ. ನನ್ನ ಬದುಕಲು ಬಿಡದ ಪಾಪಿಗಳಿಗೆ ಶಿಕ್ಷೆ ಕೊಡಿಸಿ ನನ್ನ ಆತ್ಮಕ್ಕೆ ಶಾಂತಿ ಕೊಡಿಸಿʼ ಎಂದು ಬರೆಯಲಾಗಿದೆ.

Latha-incident-at-Holehonnuru-limits.

ಲತಾ ಬಿಎಸ್ಸೆ, ಬಿ.ಇಡ್‌ ಪದವೀಧರೆಯಾಗಿದ್ದಾರೆ. ಗುರುರಾಜ್‌ ಎಂಬುವವರ ಜೊತೆಗೆ 2025ರ ಏ.14ರಂದು ಮದುವೆಯಾಗಿದ್ದರು. ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಶಿವಮೊಗ್ಗದ FDA ಬಳಿ ಕೋಟಿ ಕೋಟಿಯ ಆಸ್ತಿ, ಲೋಕಾಯುಕ್ತ ದಾಳಿಯಲ್ಲಿ ಏನೇನೆಲ್ಲ ಸಿಕ್ತು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment