SHIVAMOGGA LIVE NEWS | 30 MAY 2024
BHADRAVATHI : ಹಳೇನಗರದ ಕಂಚಿನಬಾಗಿಲು ಶ್ರೀ ಆಂಜನೇಯಸ್ವಾಮಿ ದೇವರ ಮಹಾ ರಥೋತ್ಸವವು (Ratotsava) ವೈಭವದಿಂದ ನಡೆಯಿತು. ರಥೋತ್ಸವ ಅಂಗವಾಗಿ ಮೂಲ ದೇವರಿಗೆ ಅಭಿಷೇಕ ನಂತರ ವಿಶೇಷ ಅಲಂಕಾರ ಮಾಡಲಾಯಿತು.
ಚಂದ್ರಶೇಖರ ಉಡುಪ ಮತ್ತು ದೇವಾಲಯದ ಪ್ರಧಾನ ಅರ್ಚಕ ಪವನಕುಮಾರ್ ಅವರ ಪೌರೋಹಿತ್ಯದಲ್ಲಿ ಪೂಜಾ ಕೈಂಕರ್ಯಗಳು ನಡೆಯಿತು. ಆಂಜನೇಯಸ್ವಾಮಿಯ ರಜತ ಉತ್ಸವ ಮೂರ್ತಿಯನ್ನು ದೇವಾಲಯದ ಪ್ರಾಕಾರದಲ್ಲಿ ಮಂಗಳವಾದ್ಯ ಸಹಿತವಾಗಿ ಪ್ರದಕ್ಷಿಣೆ ಮಾಡಿ, ನಂತರ ಉತ್ಸವ ಮೂರ್ತಿಯನ್ನು ಅಡ್ಡಪಲ್ಲಕ್ಕಿಯಲ್ಲಿರಿಸಿ ರಾಜಬೀದಿ ಉತ್ಸವದ ಮೂಲಕ ಹಳೇನಗರದ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯಕ್ಕೆ ತೆರಳಿ ಸಲ್ಲಿಸಲಾಯಿತು. ಪೂಜೆ ನಂತರ ಪುನಾ ಅದೇ ಮಾರ್ಗದಲ್ಲಿ ಬಂದು ಆಂಜನೇಯಸ್ವಾಮಿಯ ಉತ್ಸವ ಮೂರ್ತಿಯನ್ನು ರಥದಲ್ಲಿರಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ಭಕ್ತಾದಿಗಳಿಗೆ ತೀರ್ಥಪ್ರಸಾದ, ಅನ್ನದಾನ ವ್ಯವಸ್ಥೆ ಮಾಡಲಾಗಿತ್ತು. ದೇವಾಲಯ ಸಮಿತಿ ಕೆ.ನರಸಿಂಹಮೂರ್ತಿ ಪದಾಧಿಕಾರಿಗಳು ಹಾಜರಿದ್ದರು.
ಇದನ್ನೂ ಓದಿ – ವಿದೇಶಕ್ಕೆ ತೆರಳಲು ಸಿದ್ಧವಾಗಿದ್ದ ಶಿವಮೊಗ್ಗದ ಪ್ರೊಫೆಸರ್ಗೆ ಲಕ್ಷ ಲಕ್ಷ ವಂಚನೆ, ಆಗಿದ್ದೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200