ಭದ್ರಾವತಿಯಲ್ಲಿ ಆಂಜನೇಯ ಸ್ವಾಮಿಯ ವೈಭವದ ರಥೋತ್ಸವ, ಏನೆಲ್ಲ ಪೂಜೆ ನಡೆಯಿತು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 30 MAY 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

BHADRAVATHI : ಹಳೇನಗರದ ಕಂಚಿನಬಾಗಿಲು ಶ್ರೀ ಆಂಜನೇಯಸ್ವಾಮಿ ದೇವರ ಮಹಾ ರಥೋತ್ಸವವು (Ratotsava) ವೈಭವದಿಂದ ನಡೆಯಿತು. ರಥೋತ್ಸವ ಅಂಗವಾಗಿ ಮೂಲ ದೇವರಿಗೆ ಅಭಿಷೇಕ ನಂತರ ವಿಶೇಷ ಅಲಂಕಾರ ಮಾಡಲಾಯಿತು.

ಚಂದ್ರಶೇಖರ ಉಡುಪ ಮತ್ತು ದೇವಾಲಯದ ಪ್ರಧಾನ ಅರ್ಚಕ ಪವನಕುಮಾರ್‌ ಅವರ ಪೌರೋಹಿತ್ಯದಲ್ಲಿ ಪೂಜಾ ಕೈಂಕರ್ಯಗಳು ನಡೆಯಿತು. ಆಂಜನೇಯಸ್ವಾಮಿಯ ರಜತ ಉತ್ಸವ ಮೂರ್ತಿಯನ್ನು ದೇವಾಲಯದ ಪ್ರಾಕಾರದಲ್ಲಿ ಮಂಗಳವಾದ್ಯ ಸಹಿತವಾಗಿ ಪ್ರದಕ್ಷಿಣೆ ಮಾಡಿ, ನಂತರ ಉತ್ಸವ ಮೂರ್ತಿಯನ್ನು ಅಡ್ಡಪಲ್ಲಕ್ಕಿಯಲ್ಲಿರಿಸಿ ರಾಜಬೀದಿ ಉತ್ಸವದ ಮೂಲಕ ಹಳೇನಗರದ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯಕ್ಕೆ ತೆರಳಿ ಸಲ್ಲಿಸಲಾಯಿತು. ಪೂಜೆ ನಂತರ ಪುನಾ ಅದೇ ಮಾರ್ಗದಲ್ಲಿ ಬಂದು ಆಂಜನೇಯಸ್ವಾಮಿಯ ಉತ್ಸವ ಮೂರ್ತಿಯನ್ನು ರಥದಲ್ಲಿರಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ಭಕ್ತಾದಿಗಳಿಗೆ ತೀರ್ಥಪ್ರಸಾದ, ಅನ್ನದಾನ ವ್ಯವಸ್ಥೆ ಮಾಡಲಾಗಿತ್ತು. ದೇವಾಲಯ ಸಮಿತಿ ಕೆ.ನರಸಿಂಹಮೂರ್ತಿ ಪದಾಧಿಕಾರಿಗಳು ಹಾಜರಿದ್ದರು.

ಇದನ್ನೂ ಓದಿ – ವಿದೇಶಕ್ಕೆ ತೆರಳಲು ಸಿದ್ಧವಾಗಿದ್ದ ಶಿವಮೊಗ್ಗದ ಪ್ರೊಫೆಸರ್‌ಗೆ ಲಕ್ಷ ಲಕ್ಷ ವಂಚನೆ, ಆಗಿದ್ದೇನು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment