ಭದ್ರಾವತಿಯಲ್ಲಿ ಒಬ್ಬ ಆರೋಪಿ ಅರೆಸ್ಟ್‌, ಐದು ಮೇಕೆಗಳು ವಶಕ್ಕೆ, ಏನಿದು ಕೇಸ್‌?

ಭದ್ರಾವತಿ: ಬಾರಂದೂರು ಗ್ರಾಮದಲ್ಲಿ ಮನಿಯ ಎಂಬುವರಿಗೆ ಸೇರಿದ ಒಟ್ಟು ₹90 ಸಾವಿರ ಮೌಲ್ಯದ ಆರು ಮೇಕೆಗಳು ಕಳ್ಳತನವಾಗಿದ್ದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿ, ಐದು ಮೇಕೆಗಳನ್ನು ವಶಪಡಿಸಿಕೊಂಡಿದ್ದಾರೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಈ ಸಂಬಂಧ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ತಿಮ್ಲಾಪುರ ತಾಂಡಾದ ನಿವಾಸಿ ರವಿಕುಮಾರ್ ಅಲಿಯಾಸ್‌ ಕುಂಟ ರವಿ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ₹70 ಸಾವಿರ ಮೌಲ್ಯದ ಐದು ಮೇಕೆಗಳನ್ನು ವಶಪಡಿಸಿಕೊಳ್ಳಲಾಗಿದೆ.

Paper-Town-police-arrest-on-sheep-thief.

ಪೇಪರ್ ಟೌನ್ ಪೊಲೀಸ್ ಠಾಣೆಯ ಪಿಎಸ್‌ಐ ಕುಮಾರ್.ಎನ್ ಮಾರ್ಗದರ್ಶನದಲ್ಲಿ, ಎಎಸ್‌ಐ ಕುಮಾರ್ ಹಾಗೂ ಕ್ರೈಮ್ ವಿಭಾಗದ ಸಿಬ್ಬಂದಿ ನಾಗರಾಜ್, ಬಸವರಾಜ್ ಮತ್ತು ಭರತ್ ಅವರಿದ್ದ ತಂಡ ಕಾರ್ಯಾಚರಣೆ ನಡೆಸಿದೆ.