ಭದ್ರಾವತಿಯಲ್ಲಿ ಒಬ್ಬ ಆರೋಪಿ ಅರೆಸ್ಟ್‌, ಐದು ಮೇಕೆಗಳು ವಶಕ್ಕೆ, ಏನಿದು ಕೇಸ್‌?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಭದ್ರಾವತಿ: ಬಾರಂದೂರು ಗ್ರಾಮದಲ್ಲಿ ಮನಿಯ ಎಂಬುವರಿಗೆ ಸೇರಿದ ಒಟ್ಟು ₹90 ಸಾವಿರ ಮೌಲ್ಯದ ಆರು ಮೇಕೆಗಳು ಕಳ್ಳತನವಾಗಿದ್ದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿ, ಐದು ಮೇಕೆಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ತಿಮ್ಲಾಪುರ ತಾಂಡಾದ ನಿವಾಸಿ ರವಿಕುಮಾರ್ ಅಲಿಯಾಸ್‌ ಕುಂಟ ರವಿ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ₹70 ಸಾವಿರ ಮೌಲ್ಯದ ಐದು ಮೇಕೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಪೇಪರ್ ಟೌನ್ ಪೊಲೀಸ್ ಠಾಣೆಯ ಪಿಎಸ್‌ಐ ಕುಮಾರ್.ಎನ್ ಮಾರ್ಗದರ್ಶನದಲ್ಲಿ, ಎಎಸ್‌ಐ ಕುಮಾರ್ ಹಾಗೂ ಕ್ರೈಮ್ ವಿಭಾಗದ ಸಿಬ್ಬಂದಿ ನಾಗರಾಜ್, ಬಸವರಾಜ್ ಮತ್ತು ಭರತ್ ಅವರಿದ್ದ ತಂಡ ಕಾರ್ಯಾಚರಣೆ ನಡೆಸಿದೆ.

Paper-Town-police-arrest-on-sheep-thief.