SHIVAMOGGA LIVE NEWS | BHADRAVATAHI | 22 ಜೂನ್ 2022
ಭದ್ರಾವತಿ ವಿಐಎಸ್ಎಲ್ ಕ್ವಾರ್ಟರ್ಸ್’ನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಈತನಕ ಏನೆಲ್ಲ ಆಗಿದೆ?
ಇವತ್ತು ಬೆಳಗ್ಗೆ ವಿಐಎಸ್ಎಲ್ ಕ್ವಾರ್ಟರ್ಸ್’ನ ಆಸ್ಪತ್ರೆಗೆ ಸಮೀಪ ಚಿರತೆ ಕಾಣಿಸಿಕೊಂಡಿದೆ. ಚಿರತೆಯನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಇನ್ನು ಚಿರತೆ ಪ್ರತ್ಯಕ್ಷವಾಗಿರುವ ಮಾಹಿತಿ ತಿಳಿಯುತ್ತಿದ್ದ ಹಾಗೆ ದೊಡ್ಡ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ.
ಕಟ್ಟಡಗಳ ಮೇಲೆ ಹತ್ತಿರುವ ಜನರು ಚಿರತೆಯ ಚಲನವಲನ ಗಮನಿಸುತ್ತಿದ್ದಾರೆ. ಗಾಬರಿಗೊಂಡಿರುವ ಚಿರತೆ ಮನೆಯೊಂದರ ಆವರಣದಲ್ಲಿ ಸೇರಿಕೊಂಡಿದೆ. ಆವರಣದ ಸುತ್ತಲು ಓಡಾಡುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಸಿಬ್ಬಂದಿ, ಚಿರತೆಯಿಂದ ದೂರವಿರುವಂತೆ ಜನರಿಗೆ ತಿಳಿಸಿದ್ದಾರೆ. ಅರಿವಳಿಕೆ ತಜ್ಞರನ್ನು ಸ್ಥಳಕ್ಕೆ ಕರೆಯಿಸಲು ನಿರ್ಧರಿಸಲಾಗಿದೆ. ಇನ್ನು ಚಿರತೆಯನ್ನು ಹಿಡಿಯಲು ಬಲೆಗಳನ್ನು ತರಿಸಲಾಗಿದ್ದು, ಕಾರ್ಯಾಚರಣೆ ಆರಂಭಗೊಂಡಿದೆ.
ಮತ್ತೊಂದೆಡೆ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆ, ಮುನ್ನೆಚ್ಚರಿಕೆ ಕ್ರಮವಾಗಿ ಸಮೀಪದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – BREAKING NEWS | ಭದ್ರಾವತಿ VISL ಕ್ವಾರ್ಟರ್ಸ್ ಆವರಣದಲ್ಲಿ ಚಿರತೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.