SHIVAMOGGA LIVE NEWS | 20 APRIL 2024
HOLEHONNURU : ಮನೆಯಲ್ಲಿದ್ದ ಬೀರು ಒಡೆದು ಚಿನ್ನ, ಬೆಳ್ಳಿ ಆಭರಣ ಮತ್ತು ನಗದು ಕಳ್ಳತನ ಮಾಡಲಾಗಿದೆ. ಭದ್ರಾವತಿ ತಾಲೂಕು ಅರಬಿಳಚಿ ಗ್ರಾಮದ ಮಣಿಮೇಘಲ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.
ಮಣಿಮೇಘಲ ಕೆಲಸಕ್ಕೆ ತೆರಳಿದ್ದರು. ಅವರ ತಾಯಿ ಬಟ್ಟೆ ಒಗೆಯಲು ಸಮೀಪದ ಚಾನಲ್ಗೆ ತೆರಳಿದ್ದರು. ಈ ಸಂದರ್ಭ ಮನೆಯ ಬಾಗಿಲು ತೆರೆದು ಒಳ ನುಗ್ಗಿರುವ ಕಳ್ಳರು ಬೀರು ಒಡೆದು 20 ಸಾವಿರ ರೂ. ನಗದು, ಚಿನ್ನದ ತಾಳಿ, ಉಂಗುರ, ಕಿವಿಯೋಲೆ, ಗೆಜ್ಜೆ ಕಳ್ಳತನ ಮಾಡಿದ್ದಾರೆ. ಕಳುವಾದ ಒಟ್ಟು ವಸ್ತುಗಳ ಮೌಲ್ಯ 1 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಮಣಿಮೇಘಲ ಅವರ ತಾಯಿ ಮನೆಗೆ ಮರಳಿದಾಗ ಕಳ್ಳತನವಾಗಿರುವುದು ಗೊತ್ತಾಗಿದೆ. ಘಟನೆ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ರಾತ್ರಿ ಇಡೀ ಮಳೆ, ಗುಡುಗು, ಮಿಂಚಿನ ಆರ್ಭಟ, ಜಿಲ್ಲೆಯಾದ್ಯಂತ ಎಲ್ಲೆಲ್ಲಿ ಮಳೆಯಾಗುತ್ತಿದೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200