ಭದ್ರಾವತಿಯ ಗೌಡರಹಳ್ಳಿ ಬಳಿ ಅಪಘಾತ, ಟ್ರಾಕ್ಟರ್‌ ಚಾಲಕನ ವಿರುದ್ಧ ಪ್ರಕರಣ, ಆಗಿದ್ದೇನು?

Published On : ಮಾರ್ಚ್ 31, 2026

Published By : ನಿತಿನ್‌ ಆರ್‌.ಕೈದೊಟ್ಲು 

ಭದ್ರಾವತಿ: ತಾಲೂಕಿನ ಗೌಡರಹಳ್ಳಿ ಸಮೀಪ ಅತಿ ವೇಗವಾಗಿ ಬಂದ ಟ್ರಾಕ್ಟರ್ (tractor) ಒಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ : ಲಾರಿಯ ಚಕ್ರದಡಿ ಸಿಲುಕಿ ದಂಪತಿ ಸಾವು, ಹೇಗಾಯ್ತು ಘಟನೆ?

ಗೌಡರಹಳ್ಳಿಯ ಶನಿಮಹಾತ್ಮ ದೇವಸ್ಥಾನದ ಬಳಿ ಅಪಘಾತ ಸಂಭವಿಸಿದೆ. ಆರ್ಮುಗಂ ಎಂಬುವವರು ಟ್ರಾಕ್ಟರ್ ಅನ್ನು ವೇಗವಾಗಿ ಚಾಲನೆ ಮಾಡಿಕೊಂಡು ಬಂದು ಬೈಕ್‌ಗೆ ಡಿಕ್ಕಿ ಹೊಡೆಸಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಪರಮೇಶ ಹಾಗೂ ಅವರ ಜೊತೆಗಿದ್ದ ಮತ್ತೊಬ್ಬರಿಗೆ ತೀವ್ರ ರಕ್ತಗಾಯಗಳಾಗಿವೆ ಎಂದು ಆರೋಪಿಸಲಾಗಿದೆ.

ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಟ್ರಾಕ್ಟರ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

Sunrise Facility Services, Sri sai Trust Shimoga
JNN College of Engineering Admissions started

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 31, 2026

Leave a Comment