ಹೊಳೆಹೊನ್ನೂರಿನಲ್ಲಿ 22 ಪೌರ ಕಾರ್ಮಿಕರನ್ನು ದಿಢೀರ್‌ ಕೈಬಿಟ್ಟ ಪಟ್ಟಣ ಪಂಚಾಯಿತಿ, ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 JANUARY 2024

HOLEHONNURU : ಪಟ್ಟಣ ಪಂಚಾಯಿತಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ 22 ಪೌರ ಕಾರ್ಮಿಕರನ್ನು ಏಕಾಏಕಿ ಕೆಲಸದಿಂದ ಕೈ ಬಿಡಲಾಗಿದೆ. ಈ ಕ್ರಮ ಖಂಡಿಸಿ ಸ್ಥಳೀಯ ಮುಖಂಡರೊಂದಿಗೆ ಪೌರ ಕಾರ್ಮಿಕರು ಮುಖ್ಯಾಧಿಕಾರಿ ಕಚೇರಿಗೆ ತೆರಳಿ ಪ್ರಶ್ನಿಸಿದರು.

ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಮೂರ್ನಾಲ್ಕು ವರ್ಷದಿಂದ ಕೆಲಸ ಮಾಡುತ್ತಿರುವ 22 ಪೌರ ಕಾರ್ಮಿಕರಿಗೆ ಇನ್ಮುಂದೆ ಕೆಲಸಕ್ಕೆ ಬಾರದಂತೆ ತಿಳಿಸಲಾಗಿದೆ. ಸೇವೆ ಕಾಯಂ ಆಸೆಯಿಂದ ಕಾಯುತ್ತಿದ್ದ ಕಾರ್ಮಿಕರಿಗೆ ಪಟ್ಟಣ ಪಂಚಾಯಿತಿ ನಿರ್ಧಾರಕ್ಕೆ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ ಸ್ಥಳೀಯ ಮುಖಂಡ ಆರ್‌.ಉಮೇಶ್‌ ನೇತೃತ್ವದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕಚೇರಿಗೆ ತೆರಳಿ ಪ್ರಶ್ನಿಸಿದರು.

ಈ ವೇಳೆ ಪೌರ ಕಾರ್ಮಿಕರಿಗೆ ಮುಖ್ಯಾಧಿಕಾರಿ ಬಸವರಾಜ್‌ ಅವರು, ಪಟ್ಟಣ ಪಂಚಾಯಿತಿಗೆ ಪೌರ ಕಾರ್ಮಿಕರ ನೇರ ನೇಮಕಾತಿಗೆ ವ್ಯವಸ್ಥೆ ಮಾಡಲಾಗುತ್ತಿದೆ. ಇಲ್ಲಿ ಕೆಲಸ ಮಾಡುತ್ತಿದ್ದವರಿಗೆ ಅನುಭವ ಪತ್ರ ನೀಡಲಾಗುತ್ತದೆ. ಅವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ – SHIMOGA NEWS – ಜಿಲ್ಲೆಯ ಟಾಪ್‌ 10 ಸುದ್ದಿಗಳು, ಎಲ್ಲೆಲ್ಲಿ? ಏನೇನಾಯ್ತು? 2 ನಿಮಿಷದಲ್ಲಿ ಕಂಪ್ಲೀಟ್‌ ನ್ಯೂಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment