ಲಕ್ಷ ಲಕ್ಷ ಮೌಲ್ಯದ ಪೈಪ್‌ ಕಳ್ಳತನ ಮಾಡಿದ್ದ ಆರೋಪಿ ಅರೆಸ್ಟ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಭದ್ರಾವತಿ: ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜಲ ಜೀವನ್ ಮಿಷನ್ ಯೋಜನೆಯ ಪೈಪ್‌ಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಹೊಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಭದ್ರಾವತಿಯ ರಾಕೇಶ (30) ಬಂಧಿತ ಆರೋಪಿ. ಈತನಿಂದ ₹7,92,000 ಅಂದಾಜು ಮೌಲ್ಯದ 18 ಬಂಡಲು ಪೈಪ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Holehonnuru-Police-Station-Bhadravathi-jpg

ಯೋಜನೆಗಾಗಿ ತರಲಾಗಿದ್ದ ಪೈಪ್ ಬಂಡಲುಗಳು ಕಳುವಾದ ಬಗ್ಗೆ ಇಂಜಿನಿಯರ್ ಅವಿನಾಶ್ ಅವರು ಜೂನ್ 11ರಂದು ಹೊಳೆಹೊನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿ ಪತ್ತೆಗಾಗಿ ರಚಿಸಲಾಗಿದ್ದ ಪೊಲೀಸರ ವಿಶೇಷ ತಂಡವು ಕಾರ್ಯಾಚರಣೆ ನಡೆಸಿ ರಾಕೇಶನನ್ನು ಬಂಧಿಸಿದೆ.