ಹೊಳೆಹೊನ್ನೂರು: ಹೇಮಣ್ಣ ಕೊಲೆ ಪ್ರಕರಣದ ಆರೋಪಿ ಮಂಜ ಎಂಬಾತನ ಕಾಲಿಗೆ ಹೊಳಲೂರು ಸಮೀಪ ಪೊಲೀಸರು ಗುಂಡು (fired) ಹಾರಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೆ ಈತ ಹಲ್ಲೆಗೆ ಯತ್ನಿಸಿದ್ದ. ಆಗ ಗುಂಡು ಹಾರಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ಈ ಕುರಿತು ಮಾಧ್ಯಮಗಳಿಗೆ ವಾಟ್ಸಪ್ ಮೂಲಕ ಮಾಹಿತಿ ನೀಡಿರುವ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ತಲೆಮರೆಸಿಕೊಂಡಿದ್ದ ಮಂಜನ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು.
ಹೊಳೆಹೊನ್ನೂರು ಠಾಣೆ ಇನ್ಸ್ಪೆಕ್ಟರ್ ಲಕ್ಷ್ಮಿಪತಿ ನೇತೃತ್ವದ ತಂಡ ಆತನನ್ನು ಬಂಧಿಸಲು ತೆರಳಿತ್ತು. ಆಗ ಮಂಜ ಪೊಲೀಸ್ ಸಿಬ್ಬಂದಿ ಪ್ರಕಾಶ್ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ್ದ. ಈ ವೇಳೆ ಆತ್ಮರಕ್ಷಣೆಗಾಗಿ ಇನ್ಸ್ಪೆಕ್ಟರ್ ಲಕ್ಷ್ಮಿಪತಿ ಗುಂಡು ಹಾರಿಸಿದ್ದಾರೆ ಎಂದು ತಿಳಿಸಿದ್ದಾರೆ.
ಈಚೆಗೆ ಹೊಳೆಹೊನ್ನೂರಿನ ಹೊಸಕೊಪ್ಪದ ಪದವಿ ಪೂರ್ವ ಕಾಲೇಜು ರಸ್ತೆಯಲ್ಲಿ ಹೇಮಣ್ಣ ಎಂಬುವವರ ಹತ್ಯೆಯಾಗಿತ್ತು. ವಾಕಿಂಗ್ಗೆ ತೆರಳಿದ್ದ ಹೇಮಣ್ಣನ ಮೇಲೆ ದಾಳಿ ನಡೆಸಿ, ಕತ್ತು ಸೀಳಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಮಂಜ ಪ್ರಮುಖ ಆರೋಪಿಯಾಗಿದ್ದ ಆರೋಪಿಸಲಾಗಿದೆ.
ಇದನ್ನೂ ಓದಿ » ಮನೆಯವರೆಲ್ಲ ಮದುವೆಗೆ ತೆರಳಿದ್ದಾಗ ನೇಣು ಬಿಗಿದು ಯುವಕ ಸಾವು

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200