SHIVAMOGGA LIVE NEWS
ಭದ್ರಾವತಿ | ಖಚಿತ ಮಾಹಿತಿ ಮೇರೆಗೆ ಮನೆ ಒಂದರ ಮೇಲೆ ಪೊಲೀಸರು ದಾಳಿ (POLICE RAID) ನಡೆಸಿ 300 ಕೆ.ಜಿ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ. 8 ಜಾನುವಾರುಗಳ ರಕ್ಷಣೆ ಮಾಡಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
.png)
ಭದ್ರಾವತಿ ನಗರದ ಅನ್ವರ್ ಕಾಲೋನಿಯ ಮೋಹಿನ್ ಮೊಹಲ್ಲಾದ 1ನೇ ಅಡ್ಡರಸ್ತೆಯ ಮನೆಯೊಂದರ ಮೇಲೆ ದಾಳಿ ನಡೆಸಲಾಗಿದೆ. ಗೋವುಗಳ ವಧೆ ಮಾಡಿ ಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆ ಭದ್ರಾವತಿ ಹಳೆ ನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.
ಮುನಾವರ್ ಎಂಬಾತನಿಗೆ ಸೇರಿದ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಮನೆಯ ಎರಡನೆ ಕೊಠಡಿಯಲ್ಲಿ ಗೋ ಮಾಂಸ ಪತ್ತೆಯಾಗಿದೆ. ಇನ್ನು, ಮನೆ ಹಿಂಭಾಗದ ಶೆಡ್’ನಲ್ಲಿ ಮಾಂಸ ಕತ್ತರಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ಪೊಲೀಸ್ ದಾಳಿ ವೇಳೆ ಇಬ್ಬರು ಮಾಂಸ ಕತ್ತರಿಸುವ ಕೆಲಸದಲ್ಲಿ ನಿರತವಾಗಿದ್ದರು.
ಪೊಲೀಸರನ್ನು ಕಂಡು ಒಬ್ಬಾತ ಪರಾರಿಯಾಗಿದ್ದು, ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮನೆಯಲ್ಲಿ ಸುಮಾರು 300 ಕೆ.ಜಿಯಷ್ಟು ಗೋಮಾಂಸ ಪತ್ತೆಯಾಗಿದೆ. ಇದನ್ನು ಪರಿಶೀಲನೆ ನಡೆಸಿದ ವೈದ್ಯರು ಎರಡು ಹಸು ಮತ್ತು ಒಂದು ಕರುವಿನ ಮಾಂಸ ಎಂದು ದೃಢಿಕರಿಸಿದ್ದಾರೆ.
ಗೋವುಗಳ ರಕ್ಷಣೆ
ಶೆಡ್’ನಲ್ಲಿ ಪರಿಶೀಲನೆ ನಡೆಸಿದಾಗ ಐದು ಗೋವುಗಳು, ಎರಡು ಕರು ಮತ್ತು ಒಂದು ಕೋಣ ಪತ್ತೆಯಾಗಿದೆ. ಅವುಗಳನ್ನು ಪೊಲೀಸರು (POLICE RAID) ರಕ್ಷಣೆ ಮಾಡಿದ್ದಾರೆ. ಇನ್ನು, ಗೋವುಗಳನ್ನು ಕತ್ತರಿಸಲು ಬಳಸಿದ್ದ ಮಚ್ಚುಗಳು ಸೇರಿದಂತೆ ಹಲವು ವಸ್ತುಗಳು, ಒಂದು ಬೈಕನ್ನು ವಶಕ್ಕೆ ಪಡೆಯಲಾಗಿದೆ.
ಮುನಾವರ್ ಮತ್ತು ಮುಸ್ತಫಾ ಎಂಬುವವರ ವಿರುದ್ಧ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಿಎಸ್ಐ ಈರೇಶ್ ನೇತೃತ್ವದಲ್ಲಿ, ಸಿಬ್ಬಂದಿ ಹಾಲಪ್ಪ, ಧರ್ಮನಾಯ್ಕ, ಸಂತೋಷ್ ಕೆ, ವೀರನಗೌಡ, ರಾಜು, ಮೌನೇಶ್ ಶೀಕಲ್ ಅವರು ದಾಳಿಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ – ವಾಕಿಂಗ್ ಶೂ ಒಳಗೆ ಬುಸುಗುಡುತ್ತಿತ್ತು ನಾಗರ ಹಾವು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






