ಶಿರಾಳಕೊಪ್ಪ: ಮಂಚಿಕೊಪ್ಪದ ಹಕ್ಕಳ್ಳಿ ಎಂಬಲ್ಲಿ ಅಕ್ರಮವಾಗಿ ಕಟ್ಟಿಕೊಂಡಿದ್ದ 47 ಜಾನುವಾರುಗಳನ್ನು ಶಿರಾಳಕೊಪ್ಪ ಪೊಲೀಸರು ರಕ್ಷಿಸಿ (Secure) ಗೋ ಶಾಲೆಗೆ ಬಿಟ್ಟಿದ್ದಾರೆ.
ಹಕ್ಕಳ್ಳಿ ಗ್ರಾಮದ ಮೌಲಾನಾ ಸಾಜಿದ್ ಅಲಿ ಎಂಬುವವರ ಮಾವಿನ ತೋಟದಲ್ಲಿ ವಧೆಗಾಗಿ ಕಟ್ಟಿದ್ದ ಎರಡು ಎಮ್ಮೆಗಳು ಸೇರಿದಂತೆ 47ಕ್ಕೂ ಹೆಚ್ಚು ಜಾನುವಾರುಗಳನ್ನು ಪಿಎಸ್ಐ ಪ್ರಶಾಂತ್ ಕುಮಾರ್ ಹಾಗೂ ಸಿಬ್ಬಂದಿ ರಕ್ಷಿಸಿದ್ದಾರೆ. 250 ಕೆ.ಜಿ. ಮಾಂಸ, 4 ವಾಹನಗಳು, ಆಯುಧ ಹಾಗೂ ತಕ್ಕಡಿಯನ್ನು ವಶಕ್ಕೆ ಪಡೆದಿದ್ದಾರೆ.
ಜೈನುಲ್ಲ, ಅಕ್ಬರ್ ಸೇರಿದಂತೆ ಹತ್ತಕ್ಕೂ ಹೆಚ್ಚು ಜನ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಸಿಬ್ಬಂದಿ ಕಾರ್ತಿಕ್, ಬಂಗಾರಪ್ಪ, ಶಿವಶಂಕರ್ ಬಾರ್ಕಿ, ಪ್ರದೀಪ್, ಶಿವಮೂರ್ತಿ ಇನ್ನಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು..

ಬೈಕ್ನಲ್ಲಿ ಸಾಗಿಸುತ್ತಿದ್ದ ಗೋಮಾಂಸ ವಶಕ್ಕೆ
ಹೊಳೆಹೊನ್ನೂರು: ಕೂಡ್ಲಿ ಗ್ರಾಮದಿಂದ ಹೊಳೆಹೊನ್ನೂರಿಗೆ ಬೈಕ್ ನಲ್ಲಿ ಸಾಗಿಸುತ್ತಿದ್ದ ಗೋ ಮಾಂಸ ಪತ್ತೆ ಮಾಡಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಶೋಹಿಬ್, ಅಲ್ತಾಫ್ ಹಾಗೂ ಸೈಫ್ ಅಲಿ ಖಾನ್ ಬಂಧಿತರು. ಬೈಕ್ನಲ್ಲಿ ಗೋಮಾಂಸ ಸಾಗಿಸುತ್ತಿರುವ ದಾಳಿ ನಡೆಸಿದಾಗ ಮನೆಯೊಂದರಿಂದ ಗೋಮಾಂಸ ತಂದಿದ್ದಾಗಿ ಗೊತ್ತಾಗಿತ್ತು. ಸೈಫ್ ಅಲಿ ಖಾನ್ ಮನೆ ಮೇಲೆ ದಾಳಿ 30 ಕೆಜಿ ಗೋ ಮಾಂಸ ವಶಪಡಿಸಿಕೊಂಡಿದ್ದಾರೆ. ಮಾದರಿಯನ್ನು ವಿಧಿ ವಿಜ್ಞಾನ ಪರೀಕ್ಷೆಗೆ ಕಳುಹಿಸಿದೆ.
ಇದನ್ನೂ ಓದಿ » ಸರ್ಕಾರಿ ವಾಹನ ಸ್ವಂತಕ್ಕೆ ಬಳಕೆ ಆರೋಪ, ಶಿವಮೊಗ್ಗ ವಿಭಾಗದ ಜಂಟಿ ಆಯುಕ್ತರಿಂದ ನೊಟೀಸ್

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200