ಭದ್ರಾವತಿಯ ಹಲವೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

ನಿಮ್ಮ ಊರಿನ ಸುದ್ದಿಗಳನ್ನು ನಮಗೆ ವಾಟ್ಸಪ್ ಮಾಡಿ 7411700200

ಭದ್ರಾವತಿ: ಮೆಸ್ಕಾಂ ಗ್ರಾಮೀಣ ಉಪವಿಭಾಗದ ಲಕ್ಕವಳ್ಳಿ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ಹತ್ತಿರ ತುರ್ತು ಕಾಮಗಾರಿ ಕಾರ್ಯ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಅ.27ರಂದು ಬೆಳಿಗ್ಗೆ 9.30ರಿಂದ ಸಂಜೆ 6ಗಂಟೆವರೆಗೆ 11 ಕೆವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ (Power Cut) ಉಂಟಾಗಲಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ವದಿಯೂರು, ಗ್ಯಾರೇಜ್ ಕ್ಯಾಂಪ್, ಸಿಂಗನಮನೆ, ಶಂಕರಘಟ್ಟ, ಕುವೆಂಪು ವಿಶ್ವ ವಿದ್ಯಾನಿಲಯ, ನಲ್ಲಿಸರ, ಮಾಳೇನಹಳ್ಳಿ, ಗೋಣಿಬೀಡು, ಶಾಂತಿನಗರ, ತಾವರಘಟ್ಟ, ಮಲ್ಲಿಗೇನಹಳ್ಳಿ, ತಮ್ಮಡಿಹಳ್ಳಿ, ಜಂಕ್ಷನ್, ರಂಗನಾಥಪುರ, ಹುಣಸೇಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮನವಿ ಮಾಡಿದ್ದಾರೆ. ‌

ಇದನ್ನೂ ಓದಿ » ಶಿವಮೊಗ್ಗದಲ್ಲಿ ರಣಜಿ ಕ್ರಿಕೆಟ್‌, ಮೊದಲ ದಿನದ ಆಟ ಮುಕ್ತಾಯ, ಕರ್ನಾಟಕದ ಸ್ಕೋರ್‌ ಎಷ್ಟು? ಇಲ್ಲಿದೆ ಡಿಟೇಲ್ಸ್‌

ಹೆಚ್ಚಿನ Shimoga News, Shivamogga News ಮತ್ತು BHADRAVATHI ಸುದ್ದಿಗಳಿಗಾಗಿ ಶಿವಮೊಗ್ಗ ಲೈವ್ ನೋಡಿ.
Kalleshwara-Enterprises.webp

© ಶಿವಮೊಗ್ಗ ಲೈವ್‌ : ಅಕ್ಟೋಬರ್ 26, 2025

Leave a Comment