ಭದ್ರಾವತಿ ಡಿವೈಎಸ್‌ಪಿಯಾಗಿ ದಕ್ಷತಾ ಪದಕ ವಿಜೇತ ಪೊಲೀಸ್‌ ಅಧಿಕಾರಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಭದ್ರಾವತಿ ಉಪ ವಿಭಾಗಕ್ಕೆ ಪ್ರಕಾಶ ರಾಥೋಡ್‌ ಅವರನ್ನು DySPಯಾಗಿ ನೇಮಕ ಮಾಡಿ ಪೊಲೀಸ್‌ ಮಹಾನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಪ್ರಕಾಶ ರಥೋಡ್‌ ಅವರಿಗೆ ಪ್ರಕರಣಗಳ ತನಿಖೆಯಲ್ಲಿ ಉತ್ತಮ ಸಾಧನೆ ಮಾಡಿದ್ದಕ್ಕಾಗಿ ಇತ್ತೀಚೆಗೆ ಕೇಂದ್ರ ಗೃಹಮಂತ್ರಿಯವರ ದಕ್ಷತಾ ಪದಕ ಘೋಷಣೆಯಾಗಿದೆ.

ಸದ್ಯ ಬೆಂಗಳೂರಿನ ಕೆ.ಜಿ.ಹಳ್ಳಿ ಉಪ ವಿಭಾಗದ ಎಸಿಪಿಯಾಗಿ ಪ್ರಕಾಶ ರಾಥೋಡ್‌ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತನಿಖಾ ವಿಭಾಗದಲ್ಲಿ ಪ್ರಕಾಶ ರಾಥೋಡ್‌ ಉತ್ತಮ ಸಾಧನೆ ಮಾಡಿದ್ದಾರೆ. ಈಚೆಗೆ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಭೈರತಿ ಬಸವರಾಜ್‌ ಅವರನ್ನು ಎಸಿಪಿ ಪ್ರಕಾಶ ರಾಥೋಡ್‌ ವಿಚಾರಣೆ ಮಾಡಿದ್ದರು.

ಅ.6ರಂದು ಭದ್ರಾವತಿ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಿವೈಎಸ್‌ಪಿ ನಾಗರಾಜ್‌ ಕೆ.ಆರ್‌ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಹಾಗಾಗಿ ಡಿವೈಎಸ್‌ಪಿ ಹುದ್ದೆ ಖಾಲಿ ಇತ್ತು.

Prakash-Ratod-New-DYSp-of-Bhadravathi.

ಇದನ್ನೂ ಓದಿ » ಆರ್‌.ಎಂ.ಮಂಜುನಾಥ ಗೌಡಗೆ ಮತ್ತೊಂದು ಮಹತ್ವದ ಜವಾಬ್ದಾರಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment