ಭದ್ರಾವತಿ: ಭದ್ರಾ ಜಲಾಶಯದ ಬಲದಂಡೆ ನಾಲೆ ಒಡೆದು ಜಲಜೀವನ್ ಕಾಮಗಾರಿ ನಡೆಸುತ್ತಿರುವುದನ್ನು ಖಂಡಿಸಿ ರೈತರು ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇನ್ನೊಂದೆಡೆ ಭದ್ರಾ ಜಲಾಶಯದ ಬಲದಂಡೆ ಕಾಮಗಾರಿ ನಡೆಯುತ್ತಿರುವ ಸ್ಥಳದಿಂದ 1 ಕಿಲೋ ಮೀಟರ್ವರೆಗೆ ನಿಷೇಧಾಜ್ಞೆ (Prohibition) ಜಾರಿಗೊಳಿಸಲಾಗಿದೆ.
ಜೂನ್ 23ರ ಬೆಳಗ್ಗೆ 8 ಗಂಟೆಯಿಂದ ಜೂನ್ 25ರ ರಾತ್ರಿ 8 ಗಂಟೆವರೆಗೆ ಬಲದಂಡೆ ಕಾಮಗಾರಿ ಸ್ಥಳದ ಸುತ್ತಲು ನಿಷೇಧಾಜ್ಞೆ ವಿಧಿಸಿ ತರೀಕೆರೆ ತಹಶೀಲ್ದಾರ್ ಆದೇಶಿಸಿದ್ದಾರೆ.

ಬಿಗಿ ಪೊಲೀಸ್ ಬಂದೋಬಸ್ತ್
ಇನ್ನೊಂದೆಡೆ ರೈತರು ಕಾಮಗಾರಿ ಸ್ಥಳಕ್ಕೆ ತೆರಳದಂತೆ ಮತ್ತು ಭದ್ರಾ ಜಲಾಶಯಕ್ಕೆ ಪ್ರವೇಶಿದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಶಂಕರಘಟ್ಟ ಲಕ್ಕವಳ್ಳಿ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಲಾಗಿದೆ.

ಜಲಾಶಯದ ಮುಂಭಾಗ ಇರುವ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ವಾಹನಗಳಿಗೆ ಪರ್ಯಾಯ ಮಾರ್ಗ ಸೂಚಿಸಲಾಗಿದೆ.

ಇದನ್ನೂ ಓದಿ » ‘ಆಗ ಬೀದಿ ರಂಪಾಟ ಮಾಡಿದ್ದ ಬಿಜೆಪಿ ನಾಯಕರ ಬಾಯಿ ಈಗ ಒಣಗಿ ಹೋಗಿದೆಯೇ?ʼ, ಬೇಳೂರು ಗರಂ


