ಭದ್ರಾ ಜಲಾಶಯದ ಎಡದಂಡೆ ಸುತ್ತಲು ನಿಷೇಧಾಜ್ಞೆ ಜಾರಿ, ಡ್ಯಾಮ್‌ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್‌

FREE NEWS

ನಿಮ್ಮ ಊರಿನ ಸುದ್ದಿಗಳನ್ನು ನಮಗೆ ವಾಟ್ಸಪ್ ಮಾಡಿ

7411700200

ಭದ್ರಾವತಿ: ಭದ್ರಾ ಜಲಾಶಯದ ಬಲದಂಡೆ ನಾಲೆ ಒಡೆದು ಜಲಜೀವನ್‌ ಕಾಮಗಾರಿ ನಡೆಸುತ್ತಿರುವುದನ್ನು ಖಂಡಿಸಿ ರೈತರು ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇನ್ನೊಂದೆಡೆ ಭದ್ರಾ ಜಲಾಶಯದ ಬಲದಂಡೆ ಕಾಮಗಾರಿ ನಡೆಯುತ್ತಿರುವ ಸ್ಥಳದಿಂದ 1 ಕಿಲೋ ಮೀಟರ್‌ವರೆಗೆ ನಿಷೇಧಾಜ್ಞೆ (Prohibition) ಜಾರಿಗೊಳಿಸಲಾಗಿದೆ.

ಜೂನ್‌ 23ರ ಬೆಳಗ್ಗೆ 8 ಗಂಟೆಯಿಂದ ಜೂನ್‌ 25ರ ರಾತ್ರಿ 8 ಗಂಟೆವರೆಗೆ ಬಲದಂಡೆ ಕಾಮಗಾರಿ ಸ್ಥಳದ ಸುತ್ತಲು ನಿಷೇಧಾಜ್ಞೆ ವಿಧಿಸಿ ತರೀಕೆರೆ ತಹಶೀಲ್ದಾರ್‌ ಆದೇಶಿಸಿದ್ದಾರೆ.

Prohibition at Bhadra Dam
ಭದ್ರಾ ಜಲಾಶಯ ಮುಂದೆ ನಿಷೇಧಾಜ್ಞೆಯ ಆದೇಶದ ಫ್ಲೆಕ್ಸ್‌.

ಬಿಗಿ ಪೊಲೀಸ್‌ ಬಂದೋಬಸ್ತ್‌

ಇನ್ನೊಂದೆಡೆ ರೈತರು ಕಾಮಗಾರಿ ಸ್ಥಳಕ್ಕೆ ತೆರಳದಂತೆ ಮತ್ತು ಭದ್ರಾ ಜಲಾಶಯಕ್ಕೆ ಪ್ರವೇಶಿದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ನಿಯೋಜನೆ ಮಾಡಲಾಗಿದೆ. ಶಂಕರಘಟ್ಟ ಲಕ್ಕವಳ್ಳಿ ರಸ್ತೆಯಲ್ಲಿ ಬ್ಯಾರಿಕೇಡ್‌ ಹಾಕಲಾಗಿದೆ.

Prohibition at Bhadra Dam
ಭದ್ರಾ ಜಲಾಶಯ ಎದುರಿನ ಸೇತುವೆ ಮೇಲೆ ಬಿಗಿ ಪೊಲೀಸ್‌ ಬಂದೋಬಸ್ತ್‌.

ಜಲಾಶಯದ ಮುಂಭಾಗ ಇರುವ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ವಾಹನಗಳಿಗೆ ಪರ್ಯಾಯ ಮಾರ್ಗ ಸೂಚಿಸಲಾಗಿದೆ.

Prohibition at bhadra dam
ಭದ್ರಾ ಜಲಾಶಯ ಎಡದಂಡೆ ಕಾಮಗಾರಿ ಸ್ಥಳಕ್ಕೆ ಮುತ್ತಿಗೆ ಹಾಕಲು ಬಂದ ರೈತರು.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ‘ಆಗ ಬೀದಿ ರಂಪಾಟ ಮಾಡಿದ್ದ ಬಿಜೆಪಿ ನಾಯಕರ ಬಾಯಿ ಈಗ ಒಣಗಿ ಹೋಗಿದೆಯೇ?ʼ, ಬೇಳೂರು ಗರಂ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
ಹೆಚ್ಚಿನ Shimoga News, Shivamogga News ಮತ್ತು BHADRAVATHI ಸುದ್ದಿಗಳಿಗಾಗಿ ಶಿವಮೊಗ್ಗ ಲೈವ್ ನೋಡಿ.

© ಶಿವಮೊಗ್ಗ ಲೈವ್‌ : ಜೂನ್ 23, 2025

Leave a Comment