ಸಂಬಳ ಕೊಡಿ, ಇಎಸ್ಐ, ಪಿಎಫ್‍ ತುಂಬಿ, ಭದ್ರಾವತಿಯಲ್ಲಿ ನೌಕರರ ಪ್ರತಿಭಟನೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

120830080 973000173179893 4449507748960184350 o.jpg? nc cat=109& nc sid=8024bb& nc ohc= qkJw9Hn9FMAX 9mH2k& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಅಕ್ಟೋಬರ್ 2020

ವೇತನ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ನಿರಾವರಿ ನಿಗಮದ BRLBCಯ ನಾಲ್ಕು ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ಮತ್ತು ಗುತ್ತಿಗೆ ನೌಕರರು ಮಿಲ್ಟ್ರಿಕ್ಯಾಂಪ್‍ನಲ್ಲಿರುವ ನೀರಾವರಿ ಇಲಾಖೆ ಕಛೇರಿ ಮುಂದೆ ಪ್ರತಿಭಟನೆ ನೆಡೆಸಿದರು.

ನಾಲ್ಕು ವಿಭಾಗಗಳಲ್ಲಿ 500 ಮಂದಿ ದಿನಗೂಲಿ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದಿನ ಗುತ್ತಿಗೆದಾರ ಎರಡು ತಿಂಗಳ ವೇತನ ನೀಡಿರಲಿಲ್ಲ. ಹಾಗಾಗಿ ಹೋರಾಟ ನಡೆಸಿದ ಪರಿಣಾಮ  ಹೊಸ ಗುತ್ತಿಗೆ ನೇಮಕ ಮಾಡಲಾಗಿದೆ. ಹೊಸ ಗುತ್ತಿಗೆದಾರ ಇಎಸ್ಐ, ಪಿಎಫ್ ಕಂತು ಹಾಗೂ ವೇತನ ವ್ಯತ್ಯಾಸದ ಹಣ ತುಂಬಿಲ್ಲ ಎಂದು ಆರೋಪಿಸಿದರು.

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ವೇತನವಿಲ್ಲದೆ ದಿನಗೂಲಿ ನೌಕರರ ಬದುಕು ದುಸ್ಥರವಾಗಿದೆ. ಆದ್ದರಿಂದ ಹಳೆ ಗುತ್ತಿಗೆದಾರ ಎರಡು ತಿಂಗಳ ವೇತನವನ್ನು ತಕ್ಷಣ ನೀಡಬೇಕು ಮತ್ತು ಹೊಸ ಗುತ್ತಿಗೆದಾರರು ಇಎಸ್ಐ, ಪಿಎಫ್ ಕಂತು ಹಣ ತುಂಬಿಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನಾಕಾರರ ಮನವಿಗೆ ಸ್ಪಂಧಿಸಿದ ಕಾರ್ಯಪಾಲಕ ಇಂಜಿನಿಯರ್ ರವಿಚಂದ್ರನ್ ಗುತ್ತಿಗೆದಾರರನ್ನು ಕರೆಸಿ ಮತನಾಡಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.

ನೀರಾವರಿ ಇಲಾಖೆ ದಿನಗೂಲಿ ಹಾಗೂ ಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಹರೀಶ್, ಪ್ರಕಾಶ್ ಕುಮಾರ್, ಕರಿಬಸಪ್ಪ, ಬೊಮ್ಮನಕಟ್ಟೆ ಪ್ರಕಾಶ್, ದೇವೇಂದ್ರಪ್ಪ, ಅಸ್ಮಾ ಬಾನು, ಮೇರಿ, ಶೋಭಾ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಇದ್ದರು.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment