ಭದ್ರಾವತಿ : ಮಹಿಳೆಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಆಕೆಯ ಕುಟುಂಬದವರು ಆರೋಪಿಸಿದ್ದಾರೆ. ಅಲ್ಲದೆ ಹೆದ್ದಾರಿಯಲ್ಲಿ ಮೃತದೇಹವನ್ನು ಇರಿಸಿ ಪ್ರತಿಭಟನೆ (Protest) ನಡೆಸಿದರು.
ಇದನ್ನೂ ಓದಿ » ಸಾಗರದಲ್ಲಿ ಲಾರಿ, ಕಾರು ಪಲ್ಟಿ, ಅಪಘಾತಕ್ಕೆ ಕಾರಣ ಹಾವು, ಏನಿದು ಪ್ರಕರಣ?
ಕಳೆದ ರಾತ್ರಿ ಭದ್ರಾವತಿ ತಾಲೂಕು ಹುಣಸೇಕಟ್ಟೆ ಜಂಕ್ಷನ್ನಲ್ಲಿ ಅಶ್ವಿನಿ ಪ್ರಮೋದ್ (27) ಎಂಬ ಗೃಹಿಣಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಗಂಡ ಮನೆಗೆ ಮರಳಿದಾಗ ಅಶ್ವಿನಿ ನೇಣು ಬಿಗಿದುಕೊಂಡಿರುವ ವಿಷಯ ಬೆಳಕಿಗೆ ಬಂದಿದೆ.
ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆತ್ಮಹತ್ಯೆಯಲ್ಲ, ಕೊಲೆ ಅಂತಾ ಆರೋಪ
ಇನ್ನು, ಅಶ್ವಿನಿಯದ್ದು ಆತ್ಮಹತ್ಯೆಯಲ್ಲ ಕೊಲೆ ಎಂದು ಆಕೆಯ ಕುಟುಂಬದವರು ಆರೋಪಿಸಿದರು. ಅಶ್ವನಿಯ ಗಂಡನ ಮನೆಯವರೆ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ತಪ್ಪಿತಸ್ಥರನ್ನು ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಹುಣಸೇಕಟ್ಟೆ ಜಂಕ್ಷನ್ನಲ್ಲಿ ರಸ್ತೆಯ ಮೇಲೆ ಅಶ್ವಿನಿಯ ಮೃತದೇಹವನ್ನು ಇರಿಸಿ ಪ್ರತಿಭಟನೆ (Protest) ನಡೆಸಿದರು. ಅಶ್ವಿನಿಯ ಕುಟುಂಬದವರು, ಸಂಬಂಧಿಕರು, ವಿವಿಧ ಸಂಘಟನೆಗಳ ಪ್ರಮುಖರು ಪ್ರತಿಭಟನೆಯಲ್ಲಿ ಇದ್ದರು.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200