ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 5 JUNE 2021
ಕರೋನ ಸೋಂಕಿಗೆ ತುತ್ತಾಗಿ ಭದ್ರಾವತಿ ಟ್ರಾಫಿಕ್ ಠಾಣೆ ಸಬ್ ಇನ್ಸ್ ಪೆಕ್ಟರ್ ಕೊನೆಯುಸಿರೆಳೆದಿದ್ದಾರೆ. ಹೋಂ ಐಸೊಲೇಷನ್ಗೆ ಒಳಗಾಗಿದ್ದ ಅವರು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸಬ್ ಇನ್ಸ್ ಪೆಕ್ಟರ್ ಕೆ.ಬಿ.ರಮೇಶ್ ಅವರಿಗೆ ಮೇ 14ರಂದು ಸೋಂಕು ತಗುಲಿತ್ತು. ಹಾಗಾಗಿ ಹೋಂ ಐಸೊಲೇಷನ್ಗೆ ಒಳಗಾಗಿದ್ದರು. ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ರಮೇಶ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಸಾಗರ, ಕಾರ್ಗಲ್ ಠಾಣೆಗಳಲ್ಲಿ ಮುಖ್ಯ ಪೇದೆಯಾಗಿ, ಕಾರ್ಗಲ್, ಸೊರಬ ಠಾಣೆಯಲ್ಲಿ ಪಿಎಸ್ಐ ಆಗಿದ್ದರು. ಭದ್ರಾವತಿ ಸಂಚಾರಿ ಠಾಣೆಯಲ್ಲಿ ಪಿಎಸ್ಐ ಆಗಿದ್ದ ರಮೇಶ್ ಅವರು ಇನ್ನೊಂದು ತಿಂಗಳಲ್ಲಿ ನಿವೃತ್ತರಾಗಬೇಕಿತ್ತು. ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ಶಾಸಕ ಹಾಲಪ್ಪ ಕಂಬನಿ
ಸಬ್ ಇನ್ಸ್ ಪೆಕ್ಟರ್ ಕೆ.ಬಿ.ರಮೇಶ್ ನಿಧನಕ್ಕೆ ಸಾಗರ ಶಾಸಕ ಹರತಾಳು ಹಾಲಪ್ಪ ಕಂಬನಿ ಮಿಡಿದಿದ್ದಾರೆ. ರಮೇಶ್ ಅವರು ಕಾಲೇಜು ದಿನಗಳಲ್ಲಿ ನನ್ನ ಕ್ಲಾಸ್ ಮೇಟ್. ಅನೇಕ ಬಾರಿ ರಮೇಶ್ ಅವರ ಮನೆಗೂ ಹೋಗಿ ಆತಿಥ್ಯ ಸ್ವೀಕರಿಸಿದ್ದೇನೆ. ಅವರ ಅಗಲಿಕೆ ಮನಸಿಗೆ ತೀವ್ರ ದುಃಖ ಉಂಟು ಮಾಡಿದೆ ಎಂದಿದ್ದಾರೆ.
ಇನ್ಮುಂದೆ ಕರೋನ ಪರೀಕ್ಷೆಗೆ ಆಸ್ಪತ್ರೆಗೆ ಹೋಗೋದೆ ಬೇಡ. ನಿಮ್ಮ ಮನೆಗೆ ಬಂದು ಸ್ವ್ಯಾಬ್ ಪಡೆಯಲಾಗುತ್ತದೆ. ಇಲ್ಲಿರುವ ನಂಬರ್ಗೆ ಕರೆ ಮಾಡಿ, ಮಾಹಿತಿ ಪಡೆಯಿರಿ.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















