ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ |BHADRAVATHI NEWS | 15 JANUARY 2021
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭದ್ರಾವತಿ ಡಿಎಆರ್ ಮೈದಾನದಲ್ಲಿ ಕ್ಷಿಪ್ರ ಕಾರ್ಯ ಪಡೆ (ಆರ್ಎಎಫ್) 97 ಬೆಟಾಲಿಯನ್ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದರು.
ಬಳಿಕ ಮಾತನಾಡಿದ ಅಮಿತ್ ಷಾ, ಭದ್ರಾವತಿಯಲ್ಲಿ ಆರ್ಎಎಫ್ ಬೆಟಾಲಿಯನ್ ಸ್ಥಾಪನೆಯಿಂದ ಇಡೀ ದಕ್ಷಿಣ ಭಾರತದ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಾಯಕವಾಗಲಿದೆ.
ಇಲ್ಲಿ 350 ಕೋಟಿ ರೂ. ವೆಚ್ಚದಲ್ಲಿ ಘಟಕ ನಿರ್ಮಾಣವಾಗಲಿದ್ದು, ರಾಜ್ಯ ಸರಕಾರ 50 ಎಕರೆ ಜಮೀನು ನೀಡಿದೆ. ಇಲ್ಲಿ ಸುಸಜ್ಜಿತವಾದ ವಸತಿಗೃಹಗಳು, ಆಸ್ಪತ್ರೆ, ಕೇಂದ್ರೀಯ ವಿದ್ಯಾಲಯ, ಎಲ್ಲಾ ಸೌಲಭ್ಯಗಳನ್ನು ಹೊಂದಿರುವ ಕ್ರೀಡಾಂಗಣ ನಿರ್ಮಾಣವಾಗಲಿದೆ. ಇದರ ಪ್ರಯೋಜನ ಸ್ಥಳೀಯರಿಗೂ ದೊರೆಯುವಂತೆ ಮಾಡಲಾಗುವುದು. ಸ್ಥಳೀಯರು ಇಲ್ಲಿನ ಎಲ್ಲಾ ಸೌಲಭ್ಯಗಳ ಸಂಪೂರ್ಣ ಲಾಭ ಪಡೆದುಕೊಳ್ಳಬೇಕು ಎಂದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಇದೊಂದು ಐತಿಹಾಸಿಕ ದಿನ. ಜಿಲ್ಲಾ ಸಶಸ್ತ್ರ ಮೀಸಲು ಪಡೆಗೆ ಸೇರಿದ 97 ಎಕರೆ ಪ್ರದೇಶದಲ್ಲಿ ಆರ್ಎಎಫ್ ಘಟಕಕ್ಕೆ ರಾಜ್ಯ ಸರ್ಕಾರ 50 ಎಕರೆ ಪ್ರದೇಶ ನೀಡಿದೆ.
ಸಾರಿಗೆ ಸಂಪರ್ಕ ಉತ್ತಮವಾಗಿರುವ ಭದ್ರಾವತಿಯಲ್ಲಿ ಆರ್ಎಎಫ್ ಘಟಕ ಸ್ಥಾಪನೆಯಿಂದ ತುರ್ತು ಸಂದರ್ಭಗಳಲ್ಲಿ ಬೇರೆ ರಾಜ್ಯಗಳಿಂದ ಪಡೆಗಳನ್ನು ತರಿಸುವುದು ತಪ್ಪಲಿದೆ. ಇಲ್ಲಿ ಆರಂಭವಾಗಲಿರುವ ಘಟಕ ರಾಜ್ಯದ ಎಲ್ಲಾ ಜಿಲ್ಲೆಗಳು, ಕೇರಳದ ನಾಲ್ಕು, ಗೋವಾದ 2, ಪುದುಚೇರಿ ಮತ್ತು ಲಕ್ಷದ್ವೀಪದ ತಲಾ ಒಂದು ಜಿಲ್ಲೆಯ ವ್ಯಾಪ್ತಿಯನ್ನು ಹೊಂದಿದೆ. ತುರ್ತು ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕಾರ್ಯದಲ್ಲಿ ಆರ್ಎಎಫ್ ಕೈಜೋಡಿಸಲಿದೆ ಎಂದು ಹೇಳಿದರು.
ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಅಶ್ವಥ ನಾರಾಯಣ, ಸಚಿವರಾದ ಬಸವರಾಜ ಬೊಮ್ಮಾಯಿ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕರಾದ ಸಂಗಮೇಶ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
VIDEO / PHOTOS
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200