ಶಿವಮೊಗ್ಗ ಭದ್ರಾವತಿ ಮಧ್ಯೆ ರೈಲ್ವೆ ಮೇಲ್ಸೇತವೆ, ಉದ್ಘಾಟನೆ ಯಾವಾಗ ಗೊತ್ತಾ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS, 5 DECEMBER 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಭದ್ರಾವತಿ : ಕಡದಕಟ್ಟೆಯಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೆ ಮೇಲ್ಸೇತುವೆ (Flyover) ಕಾಮಗಾರಿಯನ್ನು ಸಂಸದ ಬಿ.ವೈ.ರಾಘವೇಂದ್ರ ಪರಿಶೀಲನೆ ನಡೆಸಿದರು. ಈ ತಿಂಗಳ ಅಂತ್ಯದೊಳಗೆ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವ ವಿಶ್ವಾಸ ವ್ಯಕ್ತಪಡಿಸಿದರು.

ಶಿವಮೊಗ್ಗ – ಭದ್ರಾವತಿ ಹದ್ದಾರಿಯ ಕಡದಕಟ್ಟೆಯಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಿಸಲಾಗುತ್ತಿದೆ. 2022ರ ಜನವರಿಯಲ್ಲಿ 23 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಆರಂಭಿಸಲಾಯಿತು. ಈಗ ಮೇಲ್ಸುತುವೆ ಕಾಮಗಾರಿ ಬಹುತೇಕ ಪೂರ್ಣಗೊಳ್ಳುವ ಹಂತಕ್ಕೆ ತಲುಪಿದೆ.

ಸಂಸದ ರಾಘವೇಂದ್ರ ಪರಿಶೀಲನೆ

ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಸಂಸದ ಬಿ.ವೈ.ರಾಘವೇಂದ್ರ ಪರಿಶೀಲಿಸಿದರು. ಈ ಸಂದರ್ಭ ರೈಲ್ವೆ ಇಲಾಖೆ ಅಧಿಕಾರಿಗಳು, ಇಂಜಿಯರ್‌ಗಳ ಜೊತೆ ಚರ್ಚಿಸಿದರು.

MP-BY-Raghavendra-checks-ROB-at-kadadakatte Flyover

2025ರ ಜನವರಿ 1ರಿಂದ ಜನರ ಓಡಾಟಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಕೆಲವು ಸಮಸ್ಯೆಗಳು ಮತ್ತು ಮಳೆಯ ನಡುವೆಯು ನಿಗದಿಯಂತೆ ಈ ತಿಂಗಳ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಂಡಿದೆ. ಎರಡು ವರ್ಷದಿಂದ ಈ ಭಾಗದ ಜನರಿಗೆ ತೊಂದರೆ ಆಗಿದೆ. ಈಗ ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು ಜನರ ಸಂಚಾರ ಸುಗಮವಾಗಲಿದೆ.

– ಬಿ.ವೈ.ರಾಘವೇಂದ್ರ, ಸಂಸದ

RED-LINE-

ಬಿಜೆಪಿ ಮುಖಂಡರಾದ ಮಂಗೋಟೆ ರುದ್ರೇಶ್‌, ಧರ್ಮಪ್ರಸಾದ್‌, ರಾಜು ತಲ್ಲೂರು ಸೇರಿದಂತೆ ಹಲವರು ಈ ಸಂದರ್ಭ ಇದ್ದರು.

Railway Over bridge flyover at kadadakatte in Bhadravathi

Railway Over bridge flyover at kadadakatte in Bhadravathi

ಇದನ್ನೂ ಓದಿ » ಜನರ ಸಮಸ್ಯೆ ನೋಡಲಾಗದೆ ರಸ್ತೆ ಗುಂಡಿಗಳನ್ನು ಮುಚ್ಚಿದ ಗ್ರಾಮ ಪಂಚಾಯಿತಿ ಸದಸ್ಯ

Flyover

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment