ಶಿವಮೊಗ್ಗ ಭದ್ರಾವತಿ ಮಧ್ಯೆ ರೈಲ್ವೆ ಮೇಲ್ಸೇತವೆ, ಉದ್ಘಾಟನೆ ಯಾವಾಗ ಗೊತ್ತಾ?

SHIVAMOGGA LIVE NEWS, 5 DECEMBER 2024

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಭದ್ರಾವತಿ : ಕಡದಕಟ್ಟೆಯಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೆ ಮೇಲ್ಸೇತುವೆ (Flyover) ಕಾಮಗಾರಿಯನ್ನು ಸಂಸದ ಬಿ.ವೈ.ರಾಘವೇಂದ್ರ ಪರಿಶೀಲನೆ ನಡೆಸಿದರು. ಈ ತಿಂಗಳ ಅಂತ್ಯದೊಳಗೆ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವ ವಿಶ್ವಾಸ ವ್ಯಕ್ತಪಡಿಸಿದರು.

ಶಿವಮೊಗ್ಗ – ಭದ್ರಾವತಿ ಹದ್ದಾರಿಯ ಕಡದಕಟ್ಟೆಯಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಿಸಲಾಗುತ್ತಿದೆ. 2022ರ ಜನವರಿಯಲ್ಲಿ 23 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಆರಂಭಿಸಲಾಯಿತು. ಈಗ ಮೇಲ್ಸುತುವೆ ಕಾಮಗಾರಿ ಬಹುತೇಕ ಪೂರ್ಣಗೊಳ್ಳುವ ಹಂತಕ್ಕೆ ತಲುಪಿದೆ.

Nanjappa Hospital Advertisement

ಸಂಸದ ರಾಘವೇಂದ್ರ ಪರಿಶೀಲನೆ

ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಸಂಸದ ಬಿ.ವೈ.ರಾಘವೇಂದ್ರ ಪರಿಶೀಲಿಸಿದರು. ಈ ಸಂದರ್ಭ ರೈಲ್ವೆ ಇಲಾಖೆ ಅಧಿಕಾರಿಗಳು, ಇಂಜಿಯರ್‌ಗಳ ಜೊತೆ ಚರ್ಚಿಸಿದರು.

MP-BY-Raghavendra-checks-ROB-at-kadadakatte Flyover

2025ರ ಜನವರಿ 1ರಿಂದ ಜನರ ಓಡಾಟಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಕೆಲವು ಸಮಸ್ಯೆಗಳು ಮತ್ತು ಮಳೆಯ ನಡುವೆಯು ನಿಗದಿಯಂತೆ ಈ ತಿಂಗಳ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಂಡಿದೆ. ಎರಡು ವರ್ಷದಿಂದ ಈ ಭಾಗದ ಜನರಿಗೆ ತೊಂದರೆ ಆಗಿದೆ. ಈಗ ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು ಜನರ ಸಂಚಾರ ಸುಗಮವಾಗಲಿದೆ.

– ಬಿ.ವೈ.ರಾಘವೇಂದ್ರ, ಸಂಸದ

MP-BY-Raghavendra-checks-ROB-at-kadadakatte Flyover

RED-LINE-

ಬಿಜೆಪಿ ಮುಖಂಡರಾದ ಮಂಗೋಟೆ ರುದ್ರೇಶ್‌, ಧರ್ಮಪ್ರಸಾದ್‌, ರಾಜು ತಲ್ಲೂರು ಸೇರಿದಂತೆ ಹಲವರು ಈ ಸಂದರ್ಭ ಇದ್ದರು.

Railway Over bridge flyover at kadadakatte in Bhadravathi

Railway Over bridge flyover at kadadakatte in Bhadravathi

ಇದನ್ನೂ ಓದಿ » ಜನರ ಸಮಸ್ಯೆ ನೋಡಲಾಗದೆ ರಸ್ತೆ ಗುಂಡಿಗಳನ್ನು ಮುಚ್ಚಿದ ಗ್ರಾಮ ಪಂಚಾಯಿತಿ ಸದಸ್ಯ

Flyover

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment