ಭದ್ರಾವತಿಯಲ್ಲಿ ಮುಂದುವರೆದ ಮಳೆ, ಕಾಂಪೌಂಡ್‌ ಕುಸಿತ, ಮನೆಗಳು ಜಲಾವೃತ

BHADRAVATHI NEWS, 12 OCTOBER 2024 : ಭದ್ರಾವತಿ ತಾಲೂಕಿನಲ್ಲಿ ಮಳೆ ಅಬ್ಬರ (RAIN) ಮುಂದುವರೆದಿದೆ. ಮನೆಗಳಿಗೆ ನೀರು ನುಗ್ಗಿದ್ದು, ರಸ್ತೆಗಳು ಜಲಾವೃತವಾಗಿವೆ. ಅಲ್ಲಲ್ಲಿ ಗೋಡೆ ಕುಸಿತದ ವರದಿಯಾಗಿದೆ.

ಮುಂದುವರೆದ ಮಳೆ ಅಬ್ಬರ

ಈ ಸುದ್ದಿ ಪ್ರಕಟವಾಗುವ ಹೊತ್ತಿಗೆ ಸಿಂಗನಮನೆ, ಮಾವಿನಕೆರೆ, ಹಿರಿಯೂರು, ಅರಳಹಳ್ಳಿ, ಕಾಗೆಕೊಡಮಗ್ಗಿ, ತಡಸ, ಬಿಳಕಿ, ನಾಗತಿಬೆಳಗಲು, ಅರೆಬಿಳಚಿ, ಕಲ್ಲಿಹಾಳ್‌, ಎಮ್ಮೆಹಟ್ಟಿ, ಗುಡುಮಘಟ್ಟ, ಮಂಗೋಟೆ, ನಿಂಬೆಗೊಂದಿ, ದಾಸರಕಲ್ಲಹಳ್ಳಿ, ಯರೆಹಳ್ಳಿ ಸುತ್ತಮುತ್ತ ಭಾರಿ ಮಳೆಯಾಗುತ್ತಿರುವ ವರದಿಯಾಗಿದೆ.

Rainfall-at-bhadravathi-taluk

ಗೋಡೆ ಕುಸಿತ, ಮನೆಗಳಿಗೆ ನೀರು

ಮಳೆ ಮುಂದುವರೆದ ಹಿನ್ನೆಲೆ ಚರಂಡಿಗಳು ತುಂಬಿ, ರಸ್ತೆ ಮೇಲೆ ನೀರು ಹರಿಯುತ್ತಿದೆ. ಅಂಗಡಿಗಳು, ಮನೆಗಳಿಗೆ ನೀರು ನುಗ್ಗಿದೆ. ಜನ್ನಾಪುರದ ಕಿತ್ತೂರು ರಾಣಿ ಚೆನ್ನಮ್ಮ ಬ್ಲಾಕ್‌ನ ಮನೆಯೊಂದರೆ ಕಾಂಪೌಂಡ್‌ ಗೋಡೆ ಕುಸಿದಿದೆ. ಮನೆಗಳಿಗೆ ನುಗ್ಗಿರುವ ನೀರನ್ನು ಹೊರಗೆ ಹಾಕಲು ಜನರು ಹರಸಾಹಸ ಪಡುತ್ತಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆ

Kalleshwara-Enterprises.webp
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment