SHIVAMOGGA LIVE NEWS | 11 OCTOBER 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
BHADRAVATHI : ನೌಕರನ ವೇತನ ಸಂಬಂಧ ಮಾಹಿತಿ ನೀಡದ ಸಾರ್ವಜನಿಕ ಮಾಹಿತಿ ಅಧಿಕಾರಿಗೆ ಮಾಹಿತಿ ಆಯೋಗ 25 ಸಾವಿರ ರೂ. ದಂಡ (Fine) ವಿಧಿಸಿದೆ.
ಮೈಸೂರು ಕಾಗದ ಕಾರ್ಖಾನೆಯ (ಎಂಪಿಎಂ) ಸಾರ್ವಜನಿಕ ಮಾಹಿತಿ ಅಧಿಕಾರಿಯೂ ಆಗಿರುವ ಮುಖ್ಯ ಆಡಳಿತಾಧಿಕಾರಿ ಜಿ.ಎಸ್ ಶ್ರೀನಿವಾಸ್ ಅವರಿಗೆ ದಂಡ (Fine) ವಿಧಿಸಲಾಗಿದೆ.
ಇದನ್ನೂ ಓದಿ- WhatsAppನಲ್ಲಿ Instagram ರೀತಿಯ ಫೀಚರ್, ಇನ್ಮುಂದೆ ನಿಮ್ಮದೆ ಚಾನಲ್ ಮಾಡಬಹುದು
ಏನಿದು ಪ್ರಕರಣ?
ನಿವೃತ್ತ ನೌಕರ ಟಿ.ಜಿ.ಬಸವರಾಜಯ್ಯ ಅವರು 2016ರ ಜನವರಿಯಿಂದ 2021ರ ಮೇ ತಿಂಗಳವರೆಗೆ ನೀಡಿರುವ ವೇತನದ ಮಾಹಿತಿ ಕೇಳಿದ್ದರು. ಪ್ರತಿ ತಿಂಗಳ ವಿವರದ ದೃಢೀಕೃತ ಪ್ರತಿ ನೀಡಬೇಕು ಎಂದು ಕಾರ್ಖಾನೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಶ್ರೀನಿವಾಸ್ ಅವರಿಗೆ ಅರ್ಜಿ ಸಲ್ಲಿಸಿದ್ದರು.
ಶ್ರೀನಿವಾಸ್ ಅವರು ನಿಗದಿತ ಅವಧಿಯಲ್ಲಿ ಮಾಹಿತಿ ಒದಗಿಸಲು ವಿಫಲರಾಗಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಆಯೋಗ, ಮಾಹಿತಿ ಹಕ್ಕು ಅಧಿನಿಯಮದ ವಿವಿಧ ಕಲಂಗಳ ಅನ್ವಯ ದಂಡ ವಿಧಿಸಿದೆ. ಈ ಕುರಿತು ರಾಜ್ಯ ಮಾಹಿತಿ ಆಯುಕ್ತ ಹೆಚ್.ಸಿ ಸತ್ಯನ್ ಅವರು ಮೇಲ್ಮನವಿದಾರ ಟಿ.ಜಿ ಬಸವರಾಜಯ್ಯ ಅವರಿಗೆ ಈ ಮಾಹಿತಿ ನೀಡಿದ್ದಾರೆ.
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






