ನಿಗದಿತ ಸಮಯಕ್ಕೆ ಮಾಹಿತಿ ನೀಡದ ಅಧಿಕಾರಿಗೆ 25 ಸಾವಿರ ದಂಡ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 11 OCTOBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

BHADRAVATHI : ನೌಕರನ ವೇತನ ಸಂಬಂಧ ಮಾಹಿತಿ ನೀಡದ ಸಾರ್ವಜನಿಕ ಮಾಹಿತಿ ಅಧಿಕಾರಿಗೆ ಮಾಹಿತಿ ಆಯೋಗ 25 ಸಾವಿರ ರೂ. ದಂಡ (Fine) ವಿಧಿಸಿದೆ.

ಮೈಸೂರು ಕಾಗದ ಕಾರ್ಖಾನೆಯ (ಎಂಪಿಎಂ) ಸಾರ್ವಜನಿಕ ಮಾಹಿತಿ ಅಧಿಕಾರಿಯೂ ಆಗಿರುವ ಮುಖ್ಯ ಆಡಳಿತಾಧಿಕಾರಿ ಜಿ.ಎಸ್ ಶ್ರೀನಿವಾಸ್‌ ಅವರಿಗೆ ದಂಡ (Fine) ವಿಧಿಸಲಾಗಿದೆ.

ಇದನ್ನೂ ಓದಿ- WhatsAppನಲ್ಲಿ Instagram ರೀತಿಯ ಫೀಚರ್‌, ಇನ್ಮುಂದೆ ನಿಮ್ಮದೆ ಚಾನಲ್‌ ಮಾಡಬಹುದು

ಏನಿದು ಪ್ರಕರಣ?

ನಿವೃತ್ತ ನೌಕರ ಟಿ.ಜಿ.ಬಸವರಾಜಯ್ಯ ಅವರು 2016ರ ಜನವರಿಯಿಂದ 2021ರ ಮೇ ತಿಂಗಳವರೆಗೆ ನೀಡಿರುವ ವೇತನದ ಮಾಹಿತಿ ಕೇಳಿದ್ದರು. ಪ್ರತಿ ತಿಂಗಳ ವಿವರದ ದೃಢೀಕೃತ ಪ್ರತಿ ನೀಡಬೇಕು ಎಂದು ಕಾರ್ಖಾನೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಶ್ರೀನಿವಾಸ್‌ ಅವರಿಗೆ ಅರ್ಜಿ ಸಲ್ಲಿಸಿದ್ದರು.

ಶ್ರೀನಿವಾಸ್‌ ಅವರು ನಿಗದಿತ ಅವಧಿಯಲ್ಲಿ ಮಾಹಿತಿ ಒದಗಿಸಲು ವಿಫಲರಾಗಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಆಯೋಗ, ಮಾಹಿತಿ ಹಕ್ಕು ಅಧಿನಿಯಮದ ವಿವಿಧ ಕಲಂಗಳ ಅನ್ವಯ ದಂಡ ವಿಧಿಸಿದೆ. ಈ ಕುರಿತು ರಾಜ್ಯ ಮಾಹಿತಿ ಆಯುಕ್ತ ಹೆಚ್.ಸಿ ಸತ್ಯನ್ ಅವರು ಮೇಲ್ಮನವಿದಾರ ಟಿ.ಜಿ ಬಸವರಾಜಯ್ಯ ಅವರಿಗೆ ಈ ಮಾಹಿತಿ ನೀಡಿದ್ದಾರೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment