ಭದ್ರಾವತಿಯ VISLಗೆ ಕೇಂದ್ರದ ಅಧಿಕಾರಿಗಳ ತಂಡ ಭೇಟಿ, ಏನೆಲ್ಲ ಪರಿಶೀಲಿಸಿದರು, ಯಾರನ್ನೆಲ್ಲ ಭೇಟಿಯಾದರು?

ಶಿವಮೊಗ್ಗ ಲೈವ್.ಕಾಂ | 11 ಮೇ 2019

ಭದ್ರಾವತಿಯ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ (VISL), ಮತ್ತೊಮ್ಮೆ ಕೇಂದ್ರದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಕೇಂದ್ರ ಉಕ್ಕು ಪ್ರಾಧಿಕಾರದ ಕಾರ್ಯದರ್ಶಿ ಬಿನಯ್ ಕುಮಾರ್, ಜಂಟಿ ಕಾರ್ಯದರ್ಶಿ ಪುನಿತ್ ಕನ್ಸಲ್, ಸೈಲ್ ಅಧ್ಯಕ್ಷ ಅನಿಲ್ ಕುಮಾರ್ ಚೌಧರಿ ನೇತೃತ್ವದ ತಂಡ VISLಗೆ ಭೇಟಿ ನೀಡಿತ್ತು.

VISL ಆವರಣದಲ್ಲಿರುವ ಸರ್.ಎಂ.ವಿಶ್ವೇಶ್ವರಾಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಅಧಿಕಾರಿಗಳು, ಕಾರ್ಖಾನೆಯ ವಿವಿಧೆಡೆ ಪರಿಶೀಲನೆ ನಡೆಸಿದರು. ಬ್ಲಾಸ್ಟ್ ಫರ್ನೇಸ್, ಸ್ಟೀಲ್ ಮೇಕಿಂಗ್ ಶಾಪ್, ಮಿಲಸ್ಸ್, ಫೋರ್ಜ್ ಪ್ಲಾಂಟ್, ಮಿಶಿನ್ ಶಾಪ್’ಗಳಿಗೆ ಭೇಟಿ ನೀಡಿದರು.

ಸರ್.ಎಂ.ವಿಶ್ವೇಶ್ವರಾಯ ಮ್ಯೂಸಿಯಂ, ಆಸ್ಪತ್ರೆ, ಹೆಲಿಪ್ಯಾಡ್ ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕೂ ಅಧಿಕಾರಿ ಭೇಟಿ ನೀಡಿ, ಪರಿಶೀಲಿಸಿದರು. ಆ ಬಳಿಕ, ಕಾರ್ಖಾನೆಯ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಯಿತು. VISLನ ಅಧಿಕಾರಿಗಳು, ಕಾರ್ಮಿಕರು ಮತ್ತು ಗುತ್ತಿಗೆ ಕಾರ್ಮಿಕರ ಸಂಘಟನೆ ಜೊತೆಗೂ ಕೇಂದ್ರದ ಅಧಿಕಾರಿಗಳು ಸಮಾಲೋಚನೆ ನಡೆಸಿದರು.

ಕೇಂದ್ರದ ಅಧಿಕಾರಿಗಳ ತಂಡ VISLಗೆ ಭೇಟಿ ನೀಡಿರುವುದು, ಕಾರ್ಮಿಕರಲ್ಲಿ ಭರವಸೆ ಮೂಡಿಸಿದೆ. ಬಂಡವಾಳ ಹಿಂತೆಗೆತದಿಂದ ಮತ್ತು ಕಾರ್ಖಾನೆ ಪುನಾರಂಭವಾಗಬಹುದು ಎಂಬ ನಿರೀಕ್ಷೆ ಮೂಡಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : May 11, 2019 at 8:55 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮೇ 11, 2019

Leave a Comment