ಶಿವಮೊಗ್ಗ ಲೈವ್.ಕಾಂ | 11 ಮೇ 2019
ಭದ್ರಾವತಿಯ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ (VISL), ಮತ್ತೊಮ್ಮೆ ಕೇಂದ್ರದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಕೇಂದ್ರ ಉಕ್ಕು ಪ್ರಾಧಿಕಾರದ ಕಾರ್ಯದರ್ಶಿ ಬಿನಯ್ ಕುಮಾರ್, ಜಂಟಿ ಕಾರ್ಯದರ್ಶಿ ಪುನಿತ್ ಕನ್ಸಲ್, ಸೈಲ್ ಅಧ್ಯಕ್ಷ ಅನಿಲ್ ಕುಮಾರ್ ಚೌಧರಿ ನೇತೃತ್ವದ ತಂಡ VISLಗೆ ಭೇಟಿ ನೀಡಿತ್ತು.
VISL ಆವರಣದಲ್ಲಿರುವ ಸರ್.ಎಂ.ವಿಶ್ವೇಶ್ವರಾಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಅಧಿಕಾರಿಗಳು, ಕಾರ್ಖಾನೆಯ ವಿವಿಧೆಡೆ ಪರಿಶೀಲನೆ ನಡೆಸಿದರು. ಬ್ಲಾಸ್ಟ್ ಫರ್ನೇಸ್, ಸ್ಟೀಲ್ ಮೇಕಿಂಗ್ ಶಾಪ್, ಮಿಲಸ್ಸ್, ಫೋರ್ಜ್ ಪ್ಲಾಂಟ್, ಮಿಶಿನ್ ಶಾಪ್’ಗಳಿಗೆ ಭೇಟಿ ನೀಡಿದರು.
ಸರ್.ಎಂ.ವಿಶ್ವೇಶ್ವರಾಯ ಮ್ಯೂಸಿಯಂ, ಆಸ್ಪತ್ರೆ, ಹೆಲಿಪ್ಯಾಡ್ ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕೂ ಅಧಿಕಾರಿ ಭೇಟಿ ನೀಡಿ, ಪರಿಶೀಲಿಸಿದರು. ಆ ಬಳಿಕ, ಕಾರ್ಖಾನೆಯ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಯಿತು. VISLನ ಅಧಿಕಾರಿಗಳು, ಕಾರ್ಮಿಕರು ಮತ್ತು ಗುತ್ತಿಗೆ ಕಾರ್ಮಿಕರ ಸಂಘಟನೆ ಜೊತೆಗೂ ಕೇಂದ್ರದ ಅಧಿಕಾರಿಗಳು ಸಮಾಲೋಚನೆ ನಡೆಸಿದರು.
ಕೇಂದ್ರದ ಅಧಿಕಾರಿಗಳ ತಂಡ VISLಗೆ ಭೇಟಿ ನೀಡಿರುವುದು, ಕಾರ್ಮಿಕರಲ್ಲಿ ಭರವಸೆ ಮೂಡಿಸಿದೆ. ಬಂಡವಾಳ ಹಿಂತೆಗೆತದಿಂದ ಮತ್ತು ಕಾರ್ಖಾನೆ ಪುನಾರಂಭವಾಗಬಹುದು ಎಂಬ ನಿರೀಕ್ಷೆ ಮೂಡಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200