ಶಿವಮೊಗ್ಗ ಲೈವ್.ಕಾಂ | 13 ಡಿಸೆಂಬರ್ 2018
ಇಂಜಿನಿಯರಿಂಗ್ ಪದವೀಧರೊಬ್ಬರು ಭದ್ರಾವತಿಯಲ್ಲಿ ಜೈನ ದೀಕ್ಷೆ ಪಡೆದು, ಸನ್ಯಾಸಿಯಾಗಿದ್ದಾರೆ. ಮೂರು ದಿನ ನಡೆದ ಕಾರ್ಯಕ್ರಮದ ಕೊನೆಯ ದಿನ, ದೀಕ್ಷೆ ಸ್ವೀಕರಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200

ಭದ್ರಾವತಿಯ ಭೂತನಗುಡಿಯ ದಿನೇಶ್ ಜೈನ್, ರಾಜುಲ್ ದೇವಿ ದಂಪತಿಯ ಮಗ ಜಿನೇಶ್ ಕುಮಾರ್ ಜೈನ್ ಜೈನ ಸನ್ಯಾಸಿಯಾಗಿದ್ದಾರೆ. ಇಂಜಿನಿಯರಿಂಗ್ ಪದವಿ ಪಡೆದಿದ್ದ ಜಿನೇಶ್ ಕುಮಾರ್ ಅವರು, ದೀಕ್ಷೆ ಪಡೆದು ಖೀಮಾ ವಿಜಯ್ ಜೀ ಮಹಾರಾಜ್ ಸಾಹೇಬ್ ಆಗಿದ್ದಾರೆ.
ಜಿನೇಶ್ ಕುಮಾರ್ ಜೈನ್ ಆವರೊಂದಿಗೆ ಆಂಧ್ರದ ಭರತ್ ಕುಮಾರ್, ವಿಜಯಪುರದ ಹಸ್ತಿಮಲ್ ಅವರು ದೀಕ್ಷೆ ಪಡೆದಿದ್ದಾರೆ. ಭದ್ರಾವತಿಯ ಕನಕಮಂಟಪ ಮೈದಾದನಲ್ಲಿ ನಡೆದ ಕಾರ್ಯಕ್ರಮಕ್ಕೆ ಕರ್ನಾಟಕ, ರಾಜಸ್ಥಾನದ ವಿವಿಧೆಡೆಯಿಂದ ಜೈನ ಸಮುದಾಯದವರು ಬಂದಿದ್ದರು. ಜೈನ ಮುನಿಗಳಾದ ಶ್ರೀ ವಿಜಯ್ ಅಭಯಚಂದ್ರ ಸೂರಿಶ್ವರ್, ಹೀರ್ ಚಂದ್ರ ಸೂರಿಶ್ವರ್ ಅವರ ನೇತೃತ್ವದಲ್ಲಿ 15 ಸಂತರು, ಐವರು ಸಾಧ್ವಿಯರು ದೀಕ್ಷೆ ಕಾರ್ಯ ನಡೆಸಿಕೊಟ್ಟರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | [email protected]