ಎಂಪಿಎಂ ಸ್ಥಗಿತದ ಆದೇಶ, ವಿಐಎಸ್ಎಲ್ ಮಾರಾಟಕ್ಕೆ ಟೆಂಡರ್ ಕರೆದಿರುವುದಕ್ಕೆ ಭದ್ರಾವತಿಯಲ್ಲಿ
ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈ ನಡುವೆ ಭದ್ರಾವತಿಯ ಯುವಕನೊಬ್ಬ ಲಡಾಕ್’ನಲ್ಲಿ ಬ್ಯಾನರ್ ಹಾಕಿ
ಪ್ರತಿಭಟನೆ ನಡೆಸಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಿಂದ ಜಮ್ಮು ಕಾಶ್ಮೀರದ ಲಡಾಕ್’ವರೆಗೂ ಬೈಕ್ ರೈಡ್ ಮಾಡಿದ್ದ ಭದ್ರಾವತಿಯ
ಜೀವನ್, ಎಂಪಿಎಂ, ವಿಐಎಸ್ಎಲ್ ಪುನಶ್ಚೇತನ ಮಾಡಬೇಕು ಎಂದು ಆಗ್ರಹಿಸಿ, ಬ್ಯಾನರ್ ಹಾಕಿ, ಕಾರ್ಖಾನೆ
ಪರವಾಗಿ ಘೋಷಣೆ ಕೂಗಿದ್ದಾರೆ.
ಈ ಕುರಿತು ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಜೀವನ್, ‘ನಮ್ಮ ತಂದೆ ಎಂಪಿಎಂ ಉದ್ಯೋಗಿಯಾಗಿ ನಿವೃತ್ತರಾಗಿದ್ದಾರೆ. ಎಂಪಿಎಂ ಆಸ್ಪತ್ರೆಯನ್ನು ಬಳಸಿದ್ದೇವೆ. ಆ ಕಾರ್ಖಾನೆಯಿಂದಾಗಿ ನಾವು ಇಷ್ಟು ಬೆಳೆದಿದ್ದೇವೆ. ಈಗ ಕಾರ್ಖಾನೆಗಳನ್ನು ಉಳಿಸಿಕೊಳ್ಳಬೇಕಿದೆ. ಹಾಗಾಗಿ ಬ್ಯಾನರ್ ಹಾಕಿ ಪ್ರತಿಭಟನೆ ನಡೆಸಿದೆವು’ ಎಂದರು.
ಜೀವನ್ ಸೇರಿ 15 ಯುವಕರು ಬೆಂಗಳೂರಿನಿಂದ ಲಡಾಕ್’ಗೆ ಬೈಕ್ ರೈಡ್ ತೆರಳಿದ್ದರು. ಈ ತಂಡದಲ್ಲಿ
ಶಿವಮೊಗ್ಗದ ಪೂರ್ಣೇಶ್ ಎಂಬುವವರು ಇದ್ದರು. ವಾಹನಗಳು ತೆರಳುವ ಕಟ್ಟಕಡೆಯ ಕಣಿವೆ ಪ್ರದೇಶದಲ್ಲಿ ನಿಂತು
ಕಾರ್ಖಾನೆಗಳನ್ನು ಉಳಿಸುವಂತೆ ಪ್ರತಿಭಟಿಸಿದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ